News Karnataka Kannada
Thursday, May 02 2024
ಉಡುಪಿ

ಕುಂದಾಪುರ: ಕುಡಿಯುವ ನೀರಿನ ಪೂರೈಕೆ ಮಾಡಲು ಸೂಕ್ತ ಕ್ರಮ – ಶಾಸಕ ಕಿರಣ್ ಕುಮಾರ್ ಕೊಡ್ಗಿ

Mla Kiran Kumar Kodgi said that steps will be taken to supply drinking water.
Photo Credit : News Kannada

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಪುರಸಭೆ ವ್ಯಾಪ್ತಿ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ತಲೆ ದೋರಿದ ಕುಡಿಯುವ ನೀರಿನ ಸಮಸ್ಯೆಯನ್ನು ಸೂಕ್ತವಾದ ರೀತಿಯಲ್ಲಿ ಬಗೆಹರಿಸುವಂತೆ ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ನೀರು ಪೂರೈಕೆ ಗುತ್ತಿಗೆದಾರ ಕಂಪೆನಿ ಮತ್ತು ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ.

ಕುಂದಾಪುರ ಪುರಸಭೆ ವ್ಯಾಪ್ತಿ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ನಳ್ಳಿಗಳಲ್ಲಿ ಉಪ್ಪು ನೀರು ಮಿಶ್ರಿತ ನೀರು ಬರುತ್ತಿದ್ದರಿಂದ,ಸ್ಥಳೀಯರು ಶುದ್ಧ ಕುಡಿಯುವ ನೀರನ್ನು ನೀಡಲು ಕ್ರಮಕೈಗೊಳ್ಳುವಂತೆ ಆಗ್ರಹವನ್ನು ಮಾಡಿದ್ದರು.ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಕೂಡ ಪ್ರಸಾರವಾಗಿತ್ತು.

ಸ್ಥಳೀಯರ ಭಾವನೆಗಳಿಗೆ ಸ್ಪಂದಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಅಧಿಕಾರಿಗಳ ಜತೆ ಸಭೆಯನ್ನು ನಡೆಸಿ ಸೂಕ್ತವಾದ ಕ್ರಮವನ್ನು ಕೈಗೊಳ್ಳಲು ಸೂಚಿಸಿದ್ದಾರೆ.ಪುರಸಭೆ ಆಡಳಿತಾಧಿಕಾರಿ ರಶ್ಮಿ ಎಸ್.ಆರ್,ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು