ಕುಂದಾಪುರ: ರಜೆಯ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಹರಿದು ಬಂದಿದೆ.
ನಿರಂತರವಾಗಿ ಸರಕಾರಿ ರಜೆ ಇದಿದ್ದರಿಂದ ಕಳೆದ ಮೂರು ದಿನಗಳಲ್ಲಿ 25,000 ಕ್ಕೂ ಅಧಿಕ ಜನರು ಭೇಟಿ ನೀಡಿದ್ದು ಶ್ರೀ ಕ್ಷೇತ್ರದಲ್ಲಿ ಭಕ್ತ ಸಮೂಹವೆ ಕಂಡು ಬಂದಿದೆ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತುಕೊಂಡು ದೇವಿಯ ದರ್ಶನವನ್ನು ಪಡೆದರು.ಕುಡಿಯುವ ನೀರು,ಪಾರ್ಕಿಂಗ್, ವಾಸ್ತವ್ಯದ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.