ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮ ಪಂಚಾಯತ್, ವ್ಯಾಪ್ತಿಯ ಬೆಣ್ಗೇರಿ ಭಾಗದಲ್ಲಿ ಶಾಸಕರ ಅನುದಾನದ ಯೋಜನೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೆಲಸ ಕಳೆದ ಎರಡು ತಿಂಗಳುಗಳಿಂದ ನಡೆಯುತ್ತಿದೆ.
ಹಳೆ ರಸ್ತೆಯನ್ನು ಅಗೆದು ಹೊಸ ರಸ್ತೆಯನ್ನು ಮಾಡುತ್ತಿರುವ ಸಂದರ್ಭದಲ್ಲಿ ಬೆಣ್ಣೇಗೆರೆ ಭಾಗಕ್ಕೆ ಹೋಗುತ್ತಿದ್ದ ಕುಡಿಯುವ ನೀರಿನ ಪೈಪ್ ಲೈನ್ ಅನ್ನು ಜೆಸಿಪಿ ಯಂತ್ರದಿಂದ ಒಡೆದು ಹಾಕಿದ ಪರಿಣಾಮ ಗುಜ್ಜಾಡಿ ಗ್ರಾಮದ ಬೆಣ್ಣೆಗೆರೆ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.
ಕುಡಿಯುವ ನೀರನ್ನು ಒದಗಿಸಿ ಕೊಡಬೇಕೆಂದು ಸ್ಥಳೀಯರು ಗುಜ್ಜಾಡಿ ಗ್ರಾಮ ಪಂಚಾಯತ್ ಕಛೇರಿಗೆ ಆಗಮಿಸಿ ರಸ್ತೆ ಕಾಮಗಾರಿ ಕೆಲಸವನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಧರಣಿಯನ್ನು ನಡೆಸಿದರು.