News Karnataka Kannada
Friday, May 03 2024
ಉಡುಪಿ

ಕುಂದಾಪುರ: ಶಿಕ್ಷಕರ ವರ್ಗಾವಣೆ ಖಂಡಿಸಿ ನಾವುಂದ ಶಾಲೆಯಲ್ಲಿ ಪ್ರತಿಭಟನೆ

Kundapur: Protest against transfer of teachers at School
Photo Credit : News Kannada

ಕುಂದಾಪುರ: ಶಾಲೆಯಲ್ಲಿ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನಿಡುತ್ತಿರುವ ಉದ್ದೇಶದಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ.ಶೈಕ್ಷಣಿಕ ವರ್ಷ ಪೂರ್ತಿ ಗೊಳ್ಳಲು ಕೇವಲ 3 ತಿಂಗಳುಗಳಷ್ಟೆ ಬಾಕಿ ಇದೆ ಪರೀಕ್ಷೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮುಖ್ಯ ಶಿಕ್ಷಕರು ಮತ್ತು ಇಂಗ್ಲೀಷ್ ಶಿಕ್ಷಕರನ್ನು ವರ್ಗಾವಣೆ ಮಾಡುವುದು ಸರಿಯಲ್ಲ ಶಿಕ್ಷಕರ ವರ್ಗಾವಣೆಯಿಂದ ಮಕ್ಕಳ ವಿದ್ಯಾಭ್ಯಾಸದ ಮೇಲೆ ದುಷ್ಪಪರಿಣಾಮ ಬೀಳುವುದರಿಂದ ಶಿಕ್ಷಕರ ವರ್ಗಾವಣೆಯನ್ನು ಕೈ ಬೀಡಬೇಕು ಎಂದು ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಚಂದ್ರ ಖಾರ್ವಿ ಹೇಳಿದರು.

ಬೈಂದೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ನಾವುಂದ ಶಾಲೆಯಲ್ಲಿ ಶಿಕ್ಷಕರ ವರ್ಗಾವಣೆಯನ್ನು ಖಂಡಿಸಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ,ಹಳೆ ವಿದ್ಯಾರ್ಥಿ ಸಂಘ ಹಾಗೂ ಮಕ್ಕಳ ಪೋಷಕರು ಮತ್ತು ವಿದ್ಯಾರ್ಥಿಗಳಿಂದ ಗುರುವಾರ ನಡೆದ ಬೃಹತ್ ಪ್ರತಿಭಟನೆಯ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ ಪ್ರತಿಭಟನೆಯ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾ ಕಾರರಿಂದ ಮನವಿಯನ್ನು ಆಲಿಸಿದರು.ಎಸ್‍ಡಿಎಂಸಿ ಉಪಾಧ್ಯಕ್ಷೆ ವೀಣಾ ನಾಯ್ಕ್,ನಾವುಂದ ಗ್ರಾ.ಪಂ ಸದಸ್ಯರಾದ ಗಣೇಶ,ರಾಮ ಖಾರ್ವಿ,ಶಾಲಾ ವಿದ್ಯಾರ್ಥಿಗಳು,ಮಕ್ಕಳ ಪೋಷಕರಾದ ಪ್ರದೀಪ್, ಜಯಲಕ್ಷ್ಮಿ,ಗ್ರಾಮಸ್ಥರು ಹಾಗೂ ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಕರುಣಾಕರ ಶೆಟ್ಟಿ,ಬಿ.ಆರ್.ಪಿ ಮಂಜುನಾಥ ನಾಯ್ಕ್,ಬೈಂದೂರು ಪಿಎಸ್‍ಐ ನಿರಂಜನ್ ಗೌಡ ಮತ್ತು ಸಿಬ್ಬಂದಿಗಳು,ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಶಾಲಾ ಎಸ್‍ಡಿಎಂಸಿ ವತಿಯಿಂದ ತಹಶೀಲ್ದಾರರಿಗೆ,ಶಿಕ್ಷಣ ಇಲಾಖೆ,ಶಾಸಕರು ಮತ್ತು ಸಚಿವರಿಗೆ ಮನವಿಯನ್ನು ಸಲ್ಲಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು