ಕುಂದಾಪುರ: ಬಜರಂಗದಳ ಬ್ಯಾನ್ ಮಾಡುವ ಕುರಿತು ಪ್ರಣಾಳಿಕೆಯನ್ನು ಹೊರಡಿಸಿರುವ ಕಾಂಗ್ರೆಸ್ ಪಕ್ಷ ತನ್ನ ನೈಜ್ಯ ರೂಪವನ್ನು ಮತ್ತೊಮ್ಮೆ ತೋರಿಸಿದೆ. ಬಜರಂಗದಳವನ್ನು ಬ್ಯಾನ್ ಮಾಡಿ ನೋಡಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಶಿವಮೊಗ್ಗ ಕ್ಷೇತ್ರ ಸಂಸದ ಬಿ.ವೈ ರಾಘವೇಂದ್ರ ಸಾವಾಲನ್ನು ಹಾಕಿದ್ದಾರೆ.
ತ್ರಾಸಿ ಮಹಾಶಕ್ತಿ ಕೇಂದ್ರದ ವತಿಯಿಂದ ಬೈಂದೂರು ವಿಧಾನಸಭೆ ಕ್ಷೇತ್ರದ ಗಂಗೊಳ್ಳಿಯಲ್ಲಿ ಬುಧವಾರ ನಡೆದ ಬೃಹತ್ ರೋಡ್ ಶೋನಲ್ಲಿ ಭಾಗವಹಿಸಿದ ಅವರು ನಂತರ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಹಿಂದೂ ಸಂಘಟನೆಗಳ ಉಳಿವಿಗೆ ಮತ್ತು ಕ್ಷೇತ್ರದ ಅಭಿವೃದ್ಧಿಯ ಮುನ್ನೋಟ ಮುಂದುವರೆಯಲು ಗುರುರಾಜ್ ಗಂಟಿಹೊಳೆ ಅವರು ಶಾಸಕರಾಗಿ ಆಯ್ಕೆ ಆಗಬೇಕು. ಬೈಂದೂರು ಕ್ಷೇತ್ರದ ಭವಿಷ್ಯವನ್ನು ಬದಲಾಯಿಸುವ ಶಕ್ತಿ ಕಾರ್ಯಕರ್ತರಲ್ಲಿದೆ ಇದೆ ಎಂದು ಹೇಳಿದರು.
ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮಾತನಾಡಿ ಗಂಗೊಳ್ಳಿ ಎನ್ನುವುದು ಹಿಂದುತ್ವದ ಭದ್ರಕೋಟೆ ಆಗಿದೆ,ಪ್ರತಿ ಮನೆ ಮನೆಗಳಲ್ಲಿ ಹಿಂದುತ್ವದ ಬಗ್ಗೆ ಭಕ್ತಿ ಮತ್ತು ಪ್ರೇಮ ಇದೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ರಕ್ಷಣೆಗೆ ಸದಾ ಸ್ಪಂದನೆ ಮಾಡಲಾಗುವುದು.ಹಿಂದಿನ ಚುನಾವಣೆಯಲ್ಲಿ ನಮ್ಮ ಶಾಸಕರಿಗೆ ಅತಿ ಹೆಚ್ಚು ಮತಗಳನ್ನು ನೀಡುವುದರ ಮುಖೇನ ಗಂಗೊಳ್ಳಿ ಜನತೆ ಅಭೂತಪೂರ್ವವಾಗಿ ಆಶೀರ್ವಾದವನ್ನು ಮಾಡಿದ್ದಾರೆ.ಈ ಬಾರಿ ಕೂಡ ಜನರು ಬೆಂಬಲವನ್ನು ನೀಡಬೇಕೆಂದು ಕೇಳಿಕೊಂಡರು.
ಓಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಗೋವಿಂದ ಬಾಬು ಪೂಜಾರಿ,ಬಿಜೇಶ್ ಚೌಟ,ವಿನೋದ್ ಭಂಡಾರಿ,ಶಕ್ತಿ ಕೇಂದ್ರದ ಅಧ್ಯಕ್ಷ ರವಿಶೆಟ್ಟಿಗಾರ್,ಹರೀಶ್ ಮೇಸ್ತ,ಆನಂದ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.