ಕುಂದಾಪುರ: ದೇವಾಲಯಗಳಿಗೆ ಹೋಗುವುದರಿಂದ ಮನಸ್ಸು ಶುದ್ಧಿ ಆಗುವುದಲ್ಲದೆ ಜ್ಞಾನದ ಸಂಪಾದನೆ ಆಗುತ್ತದೆ. ದೇವಾಲಯಗಳು ಯಾವುದೇ ಒಂದು ನಿರ್ದಿಷ್ಟವಾದ ಜಾತಿ ಸಮುದಾಯಕ್ಕೆ ಸೇರಿದ ಸ್ಥಳಗಳಲ್ಲ ಸರ್ವರಿಗೂ ಸೇರಿದ ಶ್ರದ್ಧಾ ಕೇಂದ್ರಗಳು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಬೈಂದೂರು ತಾಲೂಕಿನ ಹಳಗೇರಿ ತೆಂಕಬೆಟ್ಟು ಶ್ರೀ ಕಾಲಭೈರವ ದೇವಾಲಯದ ನವೀಕೃತ ಶಿಲಾ ದೇಗುಲ ಲೋಕಾರ್ಪಣೆ ಬ್ರಹ್ಮ ಕಲಶೋತ್ಸವ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಹಲವರಿ ಮಠದ ಶ್ರೀ ಜಗದೀಶಾನಂದನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು.
ಮಾಜಿ ಶಾಸಕ ಗೋಪಾಲ ಪೂಜಾರಿ,ಕೃಷ್ಣಮೂರ್ತಿ ಮಂಜರು,ಶ್ರೀನಿವಾಸ ಜೋಗಿ ಕೃಷ್ಣ ಪೂಜಾರಿ ಇನ್ನಿತರರು ಭಾಗವಹಿಸಿದ್ದರು. ಮಾಜಿ ಶಾಸಕರಾದ ಬಿ ಅಪ್ಪಣ್ಣ ಹೆಗಡೆ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕಾಲಭೈರವ ದೇವಾಲಯ ಜೀರ್ಣೋದ್ಧಾರ ಸಮಿತಿಯಿಂದ ವೀರೇಂದ್ರ ಹೆಗ್ಗಡೆಯವರನ್ನು ಸನ್ಮಾನಿಸಲಾಯಿತು.
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…
ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು
ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…
ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…
ಪಟ್ಟಣದ ವಿವಿಧ ವಾರ್ಡ್ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…