ಕುಂದಾಪುರ: ಉಡುಪಿ ಜಿಲ್ಲೆಯ ಪ್ರಸಿದ್ಧ ಕುಂದಾಪುರ ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ‘ದಿ ಕೇರಳ ಸ್ಟೋರಿ’ ಎನ್ನುವ ಸಿನಿಮಾಕ್ಕೆ ಸಂಬಂಧಿಸಿದ ಬ್ಯಾನರ್ ಅಳವಡಿಕೆ ಮಾಡಲಾಗಿದೆ.
ದಿ ಕೇರಳ ಸ್ಟೋರಿ ಸಿನಿಮಾದ ಮುಖಾಂತರ ಲವ್ ಜಿಹಾದ್ ಕರಾಳ ಮುಖವನ್ನು ಜಗತ್ತಿನ ಎದುರು ತೋರ್ಪಡಿಸಲು ಚಿತ್ರ ತಂಡ ಪ್ರಯತ್ನಿಸಿದೆ. ಹೀಗಾಗಿ ದಿ ಕೇರಳ ಸ್ಟೋರಿ ಸಿನಿಮಾ ಅನೇಕ ಕಾರಣಗಳಿಂದ ವಿವಾದಕ್ಕೆ ಈಡಾಗಿದೆ.
ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಕೇರಳದಲ್ಲಿ ನಡೆಯುತ್ತಿರುವ ಲವ್ ಜಿಹಾದ್ ಕರಾಳ ಮುಖವಾಡ ಮತ್ತು ಲವ್ ಜಿಹಾದ್ ಕುರಿತು ವಿವರಣೆಯನ್ನು ನೀಡಿದ್ದು ಮಾತ್ರವಲ್ಲದೆ ಜಿಹಾದಿಗಳಿಂದ ಹಿಂದೂಗಳು ಹೇಗೆ ಜಾಗೃತರಾಗಬೇಕ್ಕೆನ್ನುವ ಸಂದೇಶಗಳನ್ನು ಕೂಡ ನೀಡಿದ್ದಾರೆ.ಜಗತ್ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ರಾಜ್ಯದಿಂದ ದಿನಂಪ್ರತಿ ಸಾವಿರಾರು ಜನರು ಭೇಟಿ ನೀಡುತ್ತಾರೆ.ದಿ ಕೇರಳ ಸ್ಟೋರಿ ಚಿತ್ರವನ್ನು ಕೇರಳಿಗರು ನೋಡಿ ಚಿತ್ರದ ಮೂಲಕ ಜಾಗೃತರಾಗಬೇಕು ಎನ್ನುವ ಮನೋಭಾವನೆಯಿಂದ ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ದಿ ಕೇರಳ ಸ್ಟೋರಿ ಚಿತ್ರದ ಸಾರಾಂಶವನ್ನು ಬ್ಯಾನರ್ ನಲ್ಲಿ ಬರೆಯಲಾಗಿದೆ
ದಿ ಕೇರಳ ಸ್ಟೋರಿ ಸಿನಿಮಾಕ್ಕೆ ಹಿಂದೂಪರ ಸಂಘಟನೆಗಳು ಕೂಡ ಬೆಂಬಲ ಸೂಚಿಸಿದ್ದವು. ಆದರೆ ಇದೊಂದು ಪ್ರೊಪೊಗಾಂಡ ಸಿನಿಮಾ ಎಂದು ಅನೇಕರು ಟೀಕಿಸಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಗಳಿಸಿದೆ. ‘ದಿ ಕೇರಳ ಸ್ಟೋರಿ’ ಚಿತ್ರದ ಬಗ್ಗೆ ಕೊಲ್ಲೂರಿನಲ್ಲಿ ಪ್ರಚಾರ ಮಾಡಲಾಗುತ್ತಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ಈ ಚಿತ್ರಕ್ಕೆ ಸಂಬಂಧಿಸಿದ ಬ್ಯಾನರ್ ಇರಿಸಲಾಗಿದೆ.ಇಂಗ್ಲಿಷ್ ಮತ್ತು ಮಲಯಾಳಂ ಭಾಷೆಯಲ್ಲಿ ಬರೆದಿರುವ ಬ್ಯಾನರ್ಗಳನ್ನು ಇರಿಸಲಾಗಿದ್ದು, ಕೊಲ್ಲೂರಿಗೆ ಬರುವ ಪ್ರವಾಸಿಗರ ಗಮನ ಸೆಳೆಯಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲೂ ಈ ಬ್ಯಾನರ್ಗಳು ವೈರಲ್ ಆಗಿವೆ.
ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮೂಕಾಂಬಿಕಾ ದೇವಾಲಯದ ದ್ವಾರ ಹಾಗೂ ಆವರಣದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.