Categories: ಉಡುಪಿ

ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಆವರಣದಲ್ಲಿ ‘ದಿ ಕೇರಳ ಸ್ಟೋರಿ’

ಕುಂದಾಪುರ: ಉಡುಪಿ ಜಿಲ್ಲೆಯ ಪ್ರಸಿದ್ಧ ಕುಂದಾಪುರ ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ‘ದಿ‌ ಕೇರಳ ಸ್ಟೋರಿ’ ಎನ್ನುವ ಸಿನಿಮಾಕ್ಕೆ ಸಂಬಂಧಿಸಿದ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

ದಿ ಕೇರಳ ಸ್ಟೋರಿ ಸಿನಿಮಾದ ಮುಖಾಂತರ ಲವ್ ಜಿಹಾದ್   ಕರಾಳ ಮುಖವನ್ನು ಜಗತ್ತಿನ ಎದುರು ತೋರ್ಪಡಿಸಲು ಚಿತ್ರ ತಂಡ ಪ್ರಯತ್ನಿಸಿದೆ. ಹೀಗಾಗಿ ದಿ ಕೇರಳ ಸ್ಟೋರಿ ಸಿನಿಮಾ ಅನೇಕ ಕಾರಣಗಳಿಂದ ವಿವಾದಕ್ಕೆ ಈಡಾಗಿದೆ.

ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಕೇರಳದಲ್ಲಿ ನಡೆಯುತ್ತಿರುವ ಲವ್ ಜಿಹಾದ್ ಕರಾಳ ಮುಖವಾಡ ಮತ್ತು ಲವ್ ಜಿಹಾದ್ ಕುರಿತು ವಿವರಣೆಯನ್ನು ನೀಡಿದ್ದು ಮಾತ್ರವಲ್ಲದೆ ಜಿಹಾದಿಗಳಿಂದ ಹಿಂದೂಗಳು ಹೇಗೆ ಜಾಗೃತರಾಗಬೇಕ್ಕೆನ್ನುವ ಸಂದೇಶಗಳನ್ನು ಕೂಡ ನೀಡಿದ್ದಾರೆ.ಜಗತ್ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ರಾಜ್ಯದಿಂದ ದಿನಂಪ್ರತಿ ಸಾವಿರಾರು ಜನರು ಭೇಟಿ ನೀಡುತ್ತಾರೆ.ದಿ ಕೇರಳ ಸ್ಟೋರಿ ಚಿತ್ರವನ್ನು ಕೇರಳಿಗರು ನೋಡಿ ಚಿತ್ರದ ಮೂಲಕ ಜಾಗೃತರಾಗಬೇಕು ಎನ್ನುವ ಮನೋಭಾವನೆಯಿಂದ ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ದಿ ಕೇರಳ ಸ್ಟೋರಿ ಚಿತ್ರದ ಸಾರಾಂಶವನ್ನು ಬ್ಯಾನರ್ ನಲ್ಲಿ ಬರೆಯಲಾಗಿದೆ

ದಿ ಕೇರಳ ಸ್ಟೋರಿ ಸಿನಿಮಾಕ್ಕೆ ಹಿಂದೂಪರ ಸಂಘಟನೆಗಳು ಕೂಡ ಬೆಂಬಲ ಸೂಚಿಸಿದ್ದವು. ಆದರೆ ಇದೊಂದು ಪ್ರೊಪೊಗಾಂಡ ಸಿನಿಮಾ ಎಂದು ಅನೇಕರು ಟೀಕಿಸಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಗಳಿಸಿದೆ. ‘ದಿ ಕೇರಳ ಸ್ಟೋರಿ’ ಚಿತ್ರದ ಬಗ್ಗೆ ಕೊಲ್ಲೂರಿನಲ್ಲಿ ಪ್ರಚಾರ ಮಾಡಲಾಗುತ್ತಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ಈ ಚಿತ್ರಕ್ಕೆ ಸಂಬಂಧಿಸಿದ ಬ್ಯಾನರ್​ ಇರಿಸಲಾಗಿದೆ.ಇಂಗ್ಲಿಷ್​ ಮತ್ತು ಮಲಯಾಳಂ ಭಾಷೆಯಲ್ಲಿ ಬರೆದಿರುವ ಬ್ಯಾನರ್​ಗಳನ್ನು ಇರಿಸಲಾಗಿದ್ದು, ಕೊಲ್ಲೂರಿಗೆ ಬರುವ ಪ್ರವಾಸಿಗರ ಗಮನ ಸೆಳೆಯಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲೂ ಈ ಬ್ಯಾನರ್​ಗಳು ವೈರಲ್​ ಆಗಿವೆ.

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮೂಕಾಂಬಿಕಾ ದೇವಾಲಯದ ದ್ವಾರ ಹಾಗೂ ಆವರಣದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.

Ashika S

Recent Posts

ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಸ: ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…

2 mins ago

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

17 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

18 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

23 mins ago

ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಇತ್ತೀಚೆಗೆ ದೇಶದಾದ್ಯಂತ ಬಾಂಬ್‌ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…

34 mins ago

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

46 mins ago