ಕುಂದಾಪುರ: ಮೂಲ ಸೌಕರ್ಯದ ಸೌಲಭ್ಯಗಳನ್ನು ನೀಗಿಸದ ಹಿನ್ನೆಲೆಯಲ್ಲಿ ಬೈಂದೂರು ವಿಧಾನ ಸಭೆ ಕ್ಷೇತ್ರದ ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭಾಗಿಮನೆ ಗ್ರಾಮಸ್ಥರು ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಿ ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಮತ ಹಾಕದಿರಲು ನಿರ್ಧರಿಸಿದ್ದಾರೆ.
ಆಧುನಿಕ ಯುಗದಲ್ಲಿ ಮಾನವನ ಅವಶ್ಯಕತೆಗಳಲ್ಲಿ ಬಹು ಮುಖ್ಯವಾಗಿ ಬೇಕಾಗಿರುವ ಮೊಬೈಲ್ ಸೇವೆ ಭಾಗಿಮನೆ ಪರಿಸರದ ಜನರಿಗೆ ಮರಿಚಿಕೆ ಆಗಿದೆ.ಮೊಬೈಲ್ ನೆಟ್ವರ್ಕ್ ಅಲಭ್ಯವಾಗಿರುವುದರಿಂದ ಗ್ರಾಮದ ಜನರಿಗೆ ಹೊರ ಜಗತಿನೊಂದಿಗೆ ಸಂಪರ್ಕ ಸಾಧಿಸಲು ಕಷ್ಟ ಸಾಧ್ಯವಾಗಿದೆ.
ಬಹು ವರ್ಷಗಳ ಬೇಡಿಕೆ ಆದ ಮೊಬೈಲ್ ನೆಟ್ವರ್ಕ್ ಸೇವೆ ಕಲ್ಪಿಸಿಕೊಡುವಂತೆ ಭಾಗಿಮನೆ ಗ್ರಾಮಸ್ಥರು ಪಕ್ಷ ಭೇದ ಮರೆತು ಗ್ರಾಮ ಪಂಚಾಯತ್,ಜಿಲ್ಲಾ ಪಂಚಾಯತ್,ಎಂ.ಎಲ್.ಎ ಹಾಗೂ ಸಂಸದರಿಗೆ ಮನವಿಯನ್ನು ಸಲ್ಲಿಸಿದ್ದರು ಸ್ಪಂದನೆ ದೊರೆತ್ತಿಲ್ಲ.
ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಕೆ ಮಾಡದೆ ಇರುವುದರಿಂದ ಮುಂಬರುವ ಚುನಾವಣೆಗಳಲ್ಲಿ ಮತಗಳನ್ನು ಚಲಾಯಿಸದೆ ಇರಲು ತಿರ್ಮಾನಿಸಲಾಗಿದೆ ಇದು ಯಾವುದೆ ಪಕ್ಷದ ವಿರುದ್ಧವಾದ ಹೋರಾಟವಲ್ಲ ಎಂದು ಸ್ಥಳೀಯರು ಹೇಳುತ್ತಾರೆ.
ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಅಭಿವೃದ್ಧಿಯಲ್ಲಿ ಹಿಂದುಳಿದ ಗ್ರಾಮಗಳು ಚುನಾವಣೆ ಬಹಿಷ್ಕಾರ ಬ್ಯಾನರ್ ಅಲ್ಲಿಲ್ಲಿ ಅಳವಡಿಸಿ ಪ್ರತಿಭಟಿಸುತ್ತಿದ್ದಾರೆ.ಬೈಂದೂರು ಕ್ಷೇತ್ರವನ್ನು ಸಮಗ್ರವಾಗಿ ಅದ್ಧಿಗೊಳಿಸಲಾಗಿದೆ ಎಂದು ಹೇಳಿಕೊಳ್ಳುವ ಕ್ಷೇತ್ರದ ಶಾಸಕರಿಗೆ ಇದು ಮುಜುಗರದ ಸಂಗತಿ ಆಗಿದೆ ಚುನಾವಣೆ ಹೊತ್ತಿನಲ್ಲಿ ಮತಗಳು ಪರಿವರ್ತನೆ ಆಗುವ ಸಾಧ್ಯತೆಗಳಿದ್ದು ಬಿಜೆಪಿಗೆ ಮತಗಳು ಹೊಡೆತ ಬೀಳುವ ಸಂಭವಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…