News Karnataka Kannada
Friday, May 03 2024
ಉಡುಪಿ

ಕುಂದಾಪುರ: ಬಡಾಕೆರೆ-ಕೋಣ್ಕಿ ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Kundapur: Villagers demand development of Badakere-Konki road
Photo Credit : News Kannada

ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಣ್ಕಿ-ಬಡಾಕೆರೆ ಸಂಪರ್ಕ ರಸ್ತೆಯನ್ನು ಅಭಿವೃದ್ಧಿಗೊಳಿಸಿಲ್ಲವೆಂದು ಸಿಟ್ಟಿಗೆದ್ದ ಗ್ರಾಮಸ್ಥರು ಚುನಾವಣೆಯಲ್ಲಿ ಮತದಾನ ಮಾಡದಿರಲು ನಿರ್ಧರಿಸಿ ಚುನಾವಣ ಬಹಿಷ್ಕಾರದ ಬ್ಯಾನರ್ ನ್ನು ಅಳವಡಿಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಬಡಾಕೆರೆ ಕಟ್ಟೆ ಬಾಗಿಲಿನಿಂದ ರೈಲ್ವೆ ಸೇತುವೆ ತನಕ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ ಹೊಂಡಗುಂಡಿಗಳಿಂದ ಕೂಡಿದ್ದ ರಸ್ತೆಯಲ್ಲಿ ಸಂಚರಿಸುವುದೆ ಜನರಿಗೆ ದುಸ್ತರವಾಗಿದೆ.ಕೋಣ್ಕಿ ದರ್ಲೆಗುಡ್ಡೆಗೆ ಎಸ್ಸಿ.ಎಸ್ಟಿ ಕಾಲೋನಿಗೆ ಸಂಪರ್ಕ ಕಲ್ಪಿಸುವ ಸುಮಾರು 2.ಕಿ.ಮೀ ಉದ್ದದ ಮಣ್ಣಿನ ರಸ್ತೆ ಮಳೆಗಾಲದಲ್ಲಿ ಕೆಸರು ರಾಡಿಯಿಂದ ಕೆರೆಯಂತೆ ಭಾಸವಾಗುತ್ತದೆ,ಕೆಸರು ಮಯವಾದ ಕೋಣ್ಕಿ ರಸ್ತೆಯಲ್ಲಿ ಸಾಗುವುದೆ ಸ್ಥಳೀಯರಿಗೆ ಕಷ್ಟ ಸಾಧ್ಯವಾಗಿದ್ದು ಇಲ್ಲಿ ತನಕ ರಸ್ತೆಗೆ ಅಭಿವೃದ್ಧಿ ಭಾಗ್ಯ ದೊರೆತ್ತಿಲ್ಲ.

ಸ್ಥಳೀಯಾಡಳಿತ ಮತ್ತು ಜನಪ್ರತಿನಿಧಿಗಳಿಗೆ ಹಲವಾರು ವರ್ಷಗಳಿಂದ ಮನವಿಯಬೈಂದೂರು ವಿಧಾನಸಭೆ ಕ್ಷೇತ್ರದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಣ್ಕಿ-ಬಡಾಕೆರೆ ಸಂಪರ್ಕ ರಸ್ತೆಯನ್ನು ಅಭಿವೃದ್ಧಿಗೊಳಿಸಿಲ್ಲವೆಂದು ಸಿಟ್ಟಿಗೆದ್ದ ಗ್ರಾಮಸ್ಥರು ಚುನಾವಣೆಯಲ್ಲಿ ಮತದಾನ ಮಾಡದಿರಲು ನಿರ್ಧರಿಸಿ ಚುನಾವಣ ಬಹಿಷ್ಕಾರದ ಬ್ಯಾನರ್ ನ್ನು ಅಳವಡಿಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಸಲ್ಲಿಸಿದ್ದರೂ ಇದುವರೆಗೆ ಯಾವುದೆ ರೀತಿ ಅನುದಾನ ಬಿಡುಗಡೆಗೊಳಿಸುವ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ರಸ್ತೆ ಅಭಿವೃದ್ಧಿ ಪಡಿಸದೆ ಮತದಾನ ಮಾಡುವುದಿಲ್ಲ ಎಂದು ಹೋರಾಟಕ್ಕೆ ಇಳಿದಿರುವ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಕೂಗನ್ನು ಎತ್ತಿದ್ದಾರೆ.

ಗ್ರಾಮಾಂತರ ಪ್ರದೇಶದಲ್ಲಿ ಮತದಾನ ಬಹಿಷ್ಕಾರದ ಕೂಗು: ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಮತದಾನ ಬಹಿಷ್ಕಾರದ ಕೂಗು ಅಲ್ಲಲ್ಲಿ ಮೊಳಗುತ್ತಿದ್ದು ಕ್ಷೇತ್ರದ ಶಾಸಕರಿಗೆ ಮುಜುಗರದ ಸಂಗತಿ ಆಗಿದೆ ಇದು ಚುನಾವಣಾ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀಳುವ ಸಾಧ್ಯತೆಗಳಿವೆ.

ಕೋಣ್ಕಿ ಸಂಪರ್ಕ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕೆಂದು ಕಳೆದ ಮೂರುನಾಲ್ಕು ವರ್ಷಗಳಿಂದ ಮನವಿಯನ್ನು ಸಲ್ಲಿಸಿದ್ದರು ಇಲ್ಲಿ ತನಕ ರಸ್ತೆ ಅಭಿವೃದ್ಧಿಗೊಳಿಸುವ ಕುರಿತು ಯಾವುದೆ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ.ಹಾಗಾಗಿ ಗ್ರಾಮಸ್ಥರೆಲ್ಲ ಸೇರಿ ಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರಕ್ಕೆ ಬಂದಿದ್ದೇವೆ.
-ಸುಧೀರ್ ಕೋಣ್ಕಿ,ದರ್ಲೆಗುಡ್ಡೆ ಕಾಲೋನಿ ನಿವಾಸಿ

ನಾಡ ಗ್ರಾ.ಪಂ ವ್ಯಾಪ್ತಿಯ ಜಡ್ಡಾಡಿ ರಸ್ತೆಯನ್ನು ಈಗಾಗಲೆ ಅಭಿವೃದ್ಧಿಯನ್ನು ಮಾಡಲಾಗಿದ್ದು.ಬಡಾಕೆರೆ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವರ್ಕ್ ಆರ್ಡರ್ ಕೂಡ ಪಾಸ್ ಆಗಿದೆ,ಸದ್ಯದಲ್ಲೆ ಕಾಮಗಾರಿ ಕೆಲಸ ಆರಂಭವಾಗಲಿದೆ.ಕೋಣ್ಕಿ ರಸ್ತೆಯನ್ನು ಕೂಡ ಮುಂದಿನ ದಿನಗಳಲ್ಲಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಮತದಾನದ ಬಹಿಷ್ಕಾರವನ್ನು ಕೈ ಬೀಡಬೇಕು.
-ದಿನೇಶ ಶೆಟ್ಟಿ.ನಾಡ ಗ್ರಾ.ಪಂ ಅಧ್ಯಕ್ಷರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು