ಕುಂದಾಪುರ: ಉಡುಪಿ ಜಿಲ್ಲಾ ಬಿಜೆಪಿ ಪಾರ್ಟಿ ವತಿಯಿಂದ ಕೋಟೇಶ್ವರ ಕುರುಕ್ಷೇತ್ರ ಮೈದಾನದಲ್ಲಿ ಮಹಿಳಾ ಮೋರ್ಚ ಬೃಹತ್ ಸಮಾವೇಶ ಭಾನುವಾರ ನಡೆಯಿತು.
ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಮಾತನಾಡಿ ಮೂಲಸೌಕರ್ಯಗಳನ್ನು ನೀಡುವುದರೊಂದಿಗೆ ರಾಷ್ಟ್ರ ಹಾಗೂ ಮಾನವ ಸಂಪನ್ಮೂಲದ ಅಭಿವೃದ್ಧಿಯಲ್ಲಿ ಮುಂದೂಡಿ ಇಡುತ್ತಿರುವ ಜನಪ್ರಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಬಲಪಡಿಸಲು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತವನ್ನು ಹಾಕುವುದರೊಂದಿಗೆ ಡಬಲ್ ಇಂಜಿನ್ ಸರ್ಕಾರದ ಪರಿಕಲ್ಪನೆಗಳನ್ನು ಸಹಕಾರಿ ಗೊಳಿಸಬೇಕು ಎಂದು ಹೇಳಿದರು.
ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಚಲನಚಿತ್ರ ನಟಿ ರಾಜ್ಯ ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ದಿಕ್ಸೂಚಿ ಭಾಷಣ ಮಾಡಿದರು.
ಕುಂದಾಪುರ ಶಾಸಕ ಶ್ರೀನಿವಾಸ್ ಶೆಟ್ಟಿ, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಲಾಯಿ ಸುರೇಶ್ ನಾಯಕ್ ,ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ, ಮಂಗಳೂರು ವಿಭಾಗದ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ,ಯಶ್ ಪಾಲ್ ಸುವರ್ಣ, ರಾಜ್ಯ ಆಹಾರ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ,ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನ ಗಣೇಶ್, ಮಟ್ಟಾರ್ ರತ್ನಾಕರ್ ಹೆಗ್ಡೆ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಮತ್ತು ಕಾರ್ಯಕಾರಿಣಿ ಸದಸ್ಯೆ ಭಾಗೀರಥಿ ಮುರುಳ್ಯಾ,ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಶಂಕರ್ ಅಂಕದ ಕಟ್ಟೆ, ಕುಂದಾಪುರ ಮಂಡಲದ ಪ್ರಭಾವಿ ಸುಪ್ರಸಾದ್ ಶೆಟ್ಟಿ,ಶ್ಯಾಮಲಾ ಕುಂದರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗೀತಾಂಜಲಿ ಎಂ ಸುವರ್ಣ, ಕುಂದಾಪುರ ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪ ಪೈ,ವೀಣಾ.ವಿ ನಾಯ್ಕ್, ಬೈಂದೂರು ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ, ಉಡುಪಿ ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷೇ ವಸಂತಿ ಸತೀಶ್ ಪೂಜಾರಿ,ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸರೋಜಾ ಶೆಟ್ಟಿಗಾರ್,ಸುಮಾ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ಅನಿತಾ ಶ್ರೀಧರ್, ಕೋಟೇಶ್ವರ ಪಂಚಾಯತ್ ಉಪಾಧ್ಯಕ್ಷೆ ರಾಗೀಣಿ ದೇವಾಡಿಗ, ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಮತ್ತು ನಿವೃತ್ತ ಮುಖ್ಯ ಶಿಕ್ಷಕಿ ಇಂದ್ರಾಕ್ಷಿ ಉಡುಪ ಅವರನ್ನು ಸನ್ಮಾನಿಸಲಾಯಿತು.
ಪೂಜಾರಿದ್ದರು ಗೋವಾ ಮುಖ್ಯಮಂತ್ರಿ ಸ್ವಾಗತಿಸಿದರು.