ಕುಂದಾಪುರ: ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಪಕ್ಷದ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ ತೀವ್ರ ಕುತೂಹಲ ಕೆರಳಿಸಿದ್ದ ಬೈಂದೂರು ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ ಮಾಡದೆ ಫೈಂಡಿಂಗ್ ಇಡಲಾಗಿದೆ.
ನಿರೀಕ್ಷೆಯಂತೆ ಕುಂದಾಪುರ ಕ್ಷೇತ್ರದ ಟಿಕೆಟ್ ಮಾಜಿ ಶಾಸಕ ಎ.ಜಿ ಕೊಡ್ಗಿ ಅವರ ಮಗ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ಅವರಿಗೆ ನೀಡಲಾಗಿದೆ. ಉಡುಪಿ ಕ್ಷೇತ್ರಕ್ಕೆ ಮೊಗವೀರ ಸಮಾಜದ ಪ್ರಬಲ ಯುವ ಮುಖಂಡ ಯಶ್ ಪಾಲ್ ಸುವರ್ಣ ಅವರಿಗೆ ಟಿಕೆಟ್ ನೀಡಲಾಗಿದ್ದು ಹಾಲಿ ಶಾಸಕ ರಘುಪತಿ ಭಟ್ ಗೆ ಟಿಕೆಟ್ ಮಿಸ್ ಆಗಿದೆ.
ತೀವ್ರ ಕೂತೂಹಲ ಮೂಡಿಸಿದ್ದ ಬೈಂದೂರು ಕ್ಷೇತ್ರಕ್ಕೆ ಟಿಕೆಟ್ ಅನೌನ್ಸ್ ಮಾಡದೆ ಪೆಂಡಿಂಗ್ ಇಟ್ಟಿದೆ. ಟಿಕೆಟ್ ನಿರೀಕ್ಷೆಯಲ್ಲಿದ್ದ ಬೈಂದೂರು ಕ್ಷೇತ್ರದ ಸಂಭವನೀಯ ಅಭ್ಯರ್ಥಿಗಳಿಗೆ ನಿರಾಸೆ ಆಗಿದ್ದು ಎರಡನೇ ಲಿಸ್ಟ್ ನಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ. ಕರಾವಳಿ ಭಾಗದ ಬಹಳಷ್ಟು ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.
52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದೆ,ಗುಜರಾತ್ ಮಾದರಿಯಲ್ಲಿ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂದು ಹಿರಿಯ ಬಿಜೆಪಿ ಪಕ್ಷದ ಮುಖಂಡರುಗಳು ಹೇಳಿದ್ದಾರೆ.