News Karnataka Kannada
Tuesday, April 30 2024
ಉಡುಪಿ

ಒಟ್ಟಾಗಿ ಬೆಳೆಯೋಣ-ಬಾಳೋಣ, ಯಾರನ್ನೂ ದ್ವೇಷಿಸದೆ ಶಾಂತಿಯಿಂದ ಇರೋಣ: ಸುಧೀರ್ ಕುಮಾರ್ ಮರೋಳಿ

Let's grow and live together, let's be at peace without hating anyone.
Photo Credit : News Kannada

ಉಡುಪಿ: “ಒಟ್ಟಾಗಿ ಬೆಳೆಯೋಣ-ಬಾಳೋಣ, ಯಾರನ್ನೂ ದ್ವೇಷಿಸದೆ ಶಾಂತಿಯಿಂದ ಇರೋಣ. ಇದು ಉಪನಿಷತ್ತು ಹಾಗೂ ನಮ್ಮ ಸಂಸ್ಕೃತಿ, ಕಾಂಗ್ರೆಸ್ ನ ಆಡಳಿತದ ನೀತಿಯೂ ಇದೇ ಆಗಿದೆ.” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರ ಸುಧೀರ್ ಕುಮಾರ್ ಮರೋಳಿ ಹೇಳಿದರು.

ಇಂದು ಉಡುಪಿ ಕಾಂಗ್ರೆಸ್ ಭವನದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಜಂಟಿ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಉಡುಪಿ ವಿ.ಸಭಾ ಕ್ಷೇತ್ರದ ಮಹಿಳಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು.

ಉಡುಪಿ ವಿ.ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ಬಿಜೆಪಿಯ ಭ್ರಷ್ಟಾಚಾರ – ಬೆಲೆ ಏರಿಕೆ ಪ್ರತೀ ಮಹಿಳೆಯರಿಗೆ ಅರ್ಥವಾಗಿದೆ. ಮಹಿಳೆಯರು ಬಿಜೆಪಿ ಸರಕಾರವನ್ನು ಬದಲಾಯಿಸಬೇಕೆನ್ನುವ ಆಶಯವನ್ನು ಹೊಂದಿದ್ದಾರೆ.” ಎಂದವರು ಹೇಳಿದರು.

ಈ ಸಂಧರ್ಭದಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಮೈಸೂರು ವಿಭಾಗದ ಉಸ್ತುವಾರಿಗಳಾದ ನಿಧಿ ಚರ್ತುವೇದಿ ˌ ಉಡುಪಿ ಚಿಕ್ಕಮಗಳೂರು,ಲೋಕಸಭಾ ಕ್ಷೇತ್ರದ ವೀಕ್ಷಕರಾದ ಸುದರ್ಶನ, ಕೌಶಿಕ್ ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಹಿರಿಯ ಕಾಂಗ್ರೆಸ್ ನಾಯಕಿ ಸರಳಾ ಕಾಂಚನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ವಾಗ್ಲೆ, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು
ಕಾಂಗ್ರೆಸ್ ಮುಖಂಡರಾದ ಅಮೃತ್ ಶೆಣೈ, ವೆರೋನಿಕ ಕರ್ನೇಲಿಯೋ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು