ಕುಂದಾಪುರ: ಕೇಂದ್ರದಲ್ಲಿ ಮೋದಿ ಸರಕಾರ ಆಡಳಿತಕ್ಕೆ ಬಂದ ಬಳಿಕ ವಿಶ್ವದಲ್ಲೆ ಭಾರತ ಗುರುತಿಸಿ ಕೊಳ್ಳುವಂತಾಗಿದೆ. ದೇಶದಲ್ಲಿ ಜನಸಾಮಾನ್ಯರು ಮತ್ತು ನಾಗರಿಕರ ಕಲ್ಯಾಣಕ್ಕಾಗಿ ಯೋಗ್ಯವಾದ ನೂರಾರು ಯೋಜನೆಗಳು ಜಾರಿಗೆ ತಂದಿದೆ.
ಅಭಿವೃದ್ಧಿಯಲ್ಲಿ ಬಿಜೆಪಿ ಇತಿಹಾಸ ನಿರ್ಮಿಸಿದೆ. ಬೈಂದೂರಿನಲ್ಲಿ ಬಿಜೆಪಿ ಜಯಗಳಿಸುವ ಉದ್ದೇಶದಿಂದ ಸಂಘಟಿತರಾಗಿ ಕೆಲಸ ಮಾಡಬೇಕು ಮತ್ತು ಸಾಮಾನ್ಯ ಕಾರ್ಯಕರ್ತನು ಶಾಸಕನಾಗಿ ಆಯ್ಕೆಯಾಗಬೇಕು ಎಂದು ಮಹಾರಾಷ್ಟ್ರ ರಾಜ್ಯದ ವಿಧಾನಪರಿಷತ್ ಸದಸ್ಯ ಪ್ರವೀಣ್ ದಾರೇಕರ್ ಹೇಳಿದರು.
ಬೈಂದೂರು ಬಿಜೆಪಿ ಕಛೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ,ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ಬಿಜೆಪಿ ಮಂಡಲದ ಉಪಾಧ್ಯಕ್ಷ ಗಣೇಶ ಗಾಣಿಗ ಉಪಸ್ಥಿತರಿದ್ದರು.
ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತನ ಗೆಲುವಿಗಾಗಿ ಬಿಜೆಪಿ ಪಕ್ಷ ಟೊಂಕ ಕಟ್ಟಿ ನಿಂತಿದ್ದು ಬಿಜೆಪಿ ಪಕ್ಷದ ಘಟಾನುಘಟಿ ನಾಯಕರುಗಳು ಬೈಂದೂರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ.ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರ ರಾಷ್ಟ್ರ ಮಟ್ಟದಲ್ಲಿ ಗಮನಸೆಳೆದಿದೆ.