ಕಾರ್ಕಳ: ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಸಿಬಿಐ ನ್ಯಾಯಾಲಯವು ನಿದೋರ್ಷಿ ಎಂದು ಮಹತ್ವದ ತೀರ್ಪು ನೀಡಿದ ಸಂತೋಷ್ ರಾವ್ ಅವರ ಬೈಲೂರಿನ ಮನೆಗೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸೋಮವಾರ ಮಧ್ಯಾಹ್ನ ಭೇಟಿ ನೀಡಿದ್ದಾರೆ.
ಸಂತೋಷ್ ರಾವ್ ಅವರ ತಂದೆ ಶಿಕ್ಷಕ ಸುಧಾಕರ ರಾವ್ ಅವರಿಗೆ ಕ್ಷೌರ, ಸ್ನಾನ ಮಾಡಿಸಿ, ಹೊಸ ದೋತಿ ತೊಡಿಸಿ, ಪಾದಪೂಜೆ ಮಾಡುವ ಮೂಲಕ ಗುರುವಂದನೆ ಸಲ್ಲಿಕೆ ಮಾಡಿದ್ದಾರೆ. ಇನ್ನು ಪಾಳು ಬಿದ್ದ ಸ್ಥಿತಿಯಲ್ಲಿದ್ದ ಅವರ ಮನೆಯ ದುರಸ್ಥಿ ಕಾರ್ಯ ಮಾಡಲು ಪ್ರಾರಂಭಿಸಿದ್ದಾರೆ. ಮನೆಗೆ ಬಣ್ಣ ಬಳಿಯುವ ಕಾರ್ಯ ಆರಂಭಿಸಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ಮೈಸೂರು ಒಡನಾಡಿ ಸಂಸ್ಥೆಯ ಮುಖ್ಯಸ್ಥರು, ಇತಿಹಾಸ ಸಂಶೋಧಕ ತಮ್ಮಣ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.