News Karnataka Kannada
Friday, May 03 2024
ಉಡುಪಿ

ಮಣಿಪಾಲ: ವಸತಿ ಯೋಜನೆಗೆ ಕಟ್ಟಡ ಕಾರ್ಮಿಕ‌ರ ಕಲ್ಯಾಣ ಮಂಡಳಿ ನಿಧಿ ಬಳಕೆಗೆ ವಿರೋಧ

Manipal: Construction Workers' Welfare Board opposes use of funds for housing project
Photo Credit : News Kannada

ಮಣಿಪಾಲ: ವಸತಿ ಯೋಜನೆಗೆ ಕಟ್ಟಡ ಕಾರ್ಮಿಕ‌ರ ಕಲ್ಯಾಣ ಮಂಡಳಿ ನಿಧಿ ಬಳಸಲು ಮುಂದಾಗಿರುವುದನ್ನು ಖಂಡಿಸಿ ಹಾಗೂ ಕಡಿಮೆ ದರದಲ್ಲಿ ಮರಳು ಪೊರೈಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು.

ಕೊಳಚೆ ನಿರ್ಮೂಲನೆ ಮಂಡಳಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿ ಆಯ್ಕೆಯಾದ ಎಲ್ಲರಿಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನಕಲಿ ಕಾರ್ಮಿಕರನ್ನು ನೋಂದಾಯಿಸಿ ಇದರ ಲಾಭ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು. ನೈಜ ಕಾರ್ಮಿಕರಿಗೆ ಸೌಲಭ್ಯ ಸಿಗುವಂತಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕಟ್ಟಡ ಕಾರ್ಮಿಕರಲ್ಲದವರು ನಕಲಿ ದಾಖಲೆ ಮೂಲಕ ನೋಂದಣಿಯಾಗಿರುವವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳ ಸಂಖ್ಯೆ ಕಡಿಮೆ ಇರುವುದರಿಂದ ಕಾರ್ಮಿಕರಿಗೆ ಬಸ್ ಪಾಸ್ ಬದಲು ನಗದು ನೀಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘದ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಅಧ್ಯಕ್ಷ ಶೇಖರ್ ಬಂಗೇರ, ಶಶಿಧರ್ ಗೊಲ್ಲ ಹಾಗೂ ಕಟ್ಟಡ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು