ಮಣಿಪಾಲ: ಸರಕಾರಿ ನೌಕರರಿಗೆ ಮರಣ ಶಾಸನವಾಗಿರುವ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರಾಜ್ಯ ಸರಕಾರಿ ಎನ್ಪಿಎಸ್ ನೌಕರರ ಸಂಘದ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡ ಬೃಹತ್ ಪಾದಯಾತ್ರೆಗೆ ಇಂದ್ರಾಳಿಯಲ್ಲಿ ಚಾಲನೆ ನೀಡಲಾಯಿತು.
ಇಂದ್ರಾಳಿಯಲ್ಲಿ ಆರಂಭಗೊಂಡ ಪಾದಯಾತ್ರೆ ಲಕ್ಷ್ಮೀಂದ್ರನಗರ ಮಾರ್ಗವಾಗಿ ಮಣಿಪಾಲ ಸಿಂಡಿಕೇಟ್ ಸರ್ಕಲ್ ಗೆ ಮೂಲಕ ಸಾಗಿಬಂದು ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಸಮಾಪ್ತಿಗೊಂಡಿತು. ಪಾದಯಾತ್ರೆಯಲ್ಲಿ ಸಾವಿರಾರು ಮಂದಿ ಎನ್ ಪಿಎಸ್ ನೌಕರರು ಹಾಗೂ ಒಪಿಎಸ್ ನೌಕರರು ಪಾಲ್ಗೊಂಡಿದ್ದರು.