News Karnataka Kannada
Tuesday, May 07 2024
ಉಡುಪಿ

ಮಣಿಪಾಲ: ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರಾಧ್ಯಾಪಕ‌ನ ಅಮಾನತು

Student, professor suspended for calling professor 'terrorist'
Photo Credit : News Kannada

ಮಣಿಪಾಲ: ತರಗತಿ ನಡೆಯುತ್ತಿರುವ ಸಂದರ್ಭದಲ್ಲೇ ಸಹಾಯಕ ಪ್ರಾಧ್ಯಾಪಕರೊಬ್ಬರು ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ನಿಂದಿಸಿರುವ ಘಟನೆ ಮಣಿಪಾಲ ಮಾಹೆ ವಿಶ್ವವಿದ್ಯಾಲಯದ ಎಂಐಟಿ ಕಾಲೇಜಿನಲ್ಲಿ ನಡೆದಿದೆ.

ಪ್ರಾಧ್ಯಾಪಕರ ಮಾತಿಗೆ ವಿದ್ಯಾರ್ಥಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಬಳಿಕ ಪ್ರಾಧ್ಯಾಪಕ ವಿದ್ಯಾರ್ಥಿಯ ಕ್ಷಮೆ ಕೇಳಿದ್ದಾನೆ. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಇದರಿಂದ ತಕ್ಷಣ ಎಚ್ಚೆತ್ತ ಮಾಹೆ ಆಡಳಿತ ಮಂಡಳಿ ಪ್ರಾಧ್ಯಾಪಕನನ್ನು ಅಮಾನತು ಮಾಡಿ ಆಂತರಿಕ ತನಿಖೆಗೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಪ್ರಾಧ್ಯಾಪಕ ವಿದ್ಯಾರ್ಥಿಗಳೊಂದಿಗೆ ಮಾತನಾಡುವಾಗ ಮುಸ್ಲಿಮರು ಭಯೋತ್ಪಾದಕರು ಎಂಬ ಅರ್ಥದಲ್ಲಿ ಮಾತನಾಡಿದ್ದರು ಎನ್ನಲಾಗಿದೆ. ಅವರ ಮಾತಿನಿಂದ ಆಕ್ರೋಶಗೊಂಡ ವಿದ್ಯಾರ್ಥಿ, ತರಗತಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರು ಎಂದು ಕರೆಯಬೇಡಿ. ಅನಗತ್ಯ ತಮಾಷೆಯಾಗಿಯೂ ಈ ರೀತಿ ಮಾತನಾಡಬೇಡಿ ಎಂದು ಹೇಳಿದ್ದಾನೆ. ಆಗ ತನ್ನ ತಪ್ಪಿನ ಅರಿವಾಗಿ ಪ್ರಾಧ್ಯಾಪಕ ವಿದ್ಯಾರ್ಥಿಯ ಕ್ಷಮೆ ಕೇಳಿದ್ದಾರೆ. ನೀವು ಕ್ಷಮೆ ಕೇಳಿದ ತಕ್ಷಣ ಮಾಡಿರುವ ಆರೋಪ ಬದಲಾಗಲ್ಲ ಎಂದು ವಿದ್ಯಾರ್ಥಿ ಮತ್ತೆ ಆಕ್ಷೇಪ ಮಾಡಿದ್ದಾನೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕ ವಿರುದ್ಧ ಕ್ರಮ ಜರುಗಿಸಲಾಗಿದ್ದು, ಕೆಲಸದಿಂದ ಅಮಾನತುಗೊಲಿಸಿ ಅಂತರಿಕ ತನಿಖೆಗೆ ಮಾಹೆ ವಿವಿ ಒಳಪಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು