ಉಡುಪಿ: ಕಳೆದ ಎರಡ್ಮೂರು ದಿನಗಳಿಂದ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಮಠ ಪಾರ್ಕಿಂಗ್ ಆಸುಪಾಸಿನ ಪ್ರದೇಶಗಳಾದ ಬೈಲಕರೆ ಹಾಗೂ ಕಲ್ಸಂಕ ಬಳಿಯ ಹಲವು ಮನೆಗಳು ನೀರಿನಲ್ಲಿ ಸಂಪೂರ್ಣ ಮುಳುಗಡೆಯಾಗಿದೆ.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್, ಸಹಾಯಕ ಅಗ್ನಿಶಾಮಕ ದಳ ಅಧಿಕಾರಿ ಮೀರ್ ಮೊಹ್ಮದ್ ಗೌಸ್ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಕುಂಜಿಬೆಟ್ಟು ನಗರಸಭಾ ಸದಸ್ಯ ಗಿರೀಶ್ ಅಂಚನ್, ಮಾಜಿ ನಗರಸಭಾ ಸದಸ್ಯರಾದ ಶಶಿರಾಜ್ ಕುಂದರ್, ಆರ್.ಕೆ ರಮೇಶ್ ಪೂಜಾರಿ, ಶಿವಳ್ಳಿ ಗ್ರಾಮ ಲೆಕ್ಕಿಗರಾರ ಪ್ರಮೋದ್ ಹಾಗೂ ಪ್ರದೀಪ್ ಶೇರಿಗಾರ್, ಸುನಿಲ್ ಬೈಲಕರೆ, ಸಂದೇಶ್ ದೇವಾಡಿಗ, ಪ್ರಣಮ್, ಸುಹಾಸ್, ಸಂಪತ್, ರಾಘವೇಂದ್ರ ಹಾಗೂ ಸಂಜಯ್ ಆಚಾರ್ಯ ಸಹಕರಿಸಿದರು.