ಕುಂದಾಪುರ: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಬೈಂದೂರು ತಾಲೂಕು ಹಾಗೂ ಗ್ರಾಮ ಪಂಚಾಯತ್ ಮರವಂತೆ ಅವರ ಆಶ್ರಯದಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ ಹಾಗೂ 2016 ರ ವಿಶೇಷಚೇತನರ ಕಾಯ್ದೆ ಹಾಗೂ ಸರಕಾರದಿಂದ ಸಿಗುವ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ಮರವಂತೆ ಗ್ರಾಮ ಪಂಚಾಯತ್ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು.
ಮರವಂತೆ ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆಯನ್ನು ವಹಿಸಿದ್ದರು,ಉಪಾಧ್ಯಕ್ಷ ಲೋಕೇಶ್ ಖಾರ್ವಿ, ಅಭಿವೃದ್ಧಿ ಅಧಿಕಾರಿ ಶೋಭಾ.ಎಸ್,ಕಾರ್ಯದರ್ಶಿ ದಿನೇಶ್ ಶೇರುಗಾರ್,ಪಂಚಾಯತ್ ಸದಸ್ಯರು,ಇಲಾಖೆಯ ಅಧಿಕಾರಿಗಳು, ಗ್ರಾಮಮಸ್ಥರು, ಪಂಚಾಯತ್ ಸಿಬ್ಬಂದಿಗಳಾದ ಗುರುರಾಜ, ನಿತಿನ್, ಪ್ರಭಾಕರ್ ಉಪಸ್ಥಿತರಿದ್ದರು.