ಉಡುಪಿ: ಮೂಡುಮಟ್ಟಾರು ಶ್ರೀ ಬಬ್ಬರ್ಯ ದೈವಸ್ಥಾನ ಶಿಲಾನ್ಯಾಸ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಶಿರ್ವ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ನಿತ್ಯಾನಂದ ಹೆಗ್ಡೆ, ಪಡು ಮಟ್ಟಾರು ಬಬ್ಬರ್ಯ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಮಟ್ಟಾರು ರತ್ನಾಕರ ಹೆಗ್ಡೆ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತನ್ ಶೆಟ್ಟಿ, ಉದ್ಯಮಿಗಳಾದ ಆರ್.ಕೆ ದಿವಾಕರ್, ವಿವೇಕ್ ಆಚಾರ್ಯ, ಅಭಿಯಂತರರಾದ ಪ್ರಸಾದ್ ಶೆಟ್ಟಿ ಕುತ್ಯಾರು, ಮಡಸ್ಥಾನದ ರವಿ ಶೆಟ್ಟಿ ಉಪಸ್ಥಿತರಿದ್ದರು.