News Karnataka Kannada
Thursday, May 09 2024
ಉಡುಪಿ

ಮೂಡುಸಗ್ರಿ: ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

ಮೂಡುಸಗ್ರಿ ಶ್ರೀ ಆದಿಶಕ್ತಿ ದೇವಸ್ಥಾನದ ಸಮೀಪದ ಮನೆಯ ಹಿಂಭಾಗದಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.
Photo Credit : NewsKarnataka

ಉಡುಪಿ: ಮೂಡುಸಗ್ರಿ ಶ್ರೀ ಆದಿಶಕ್ತಿ ದೇವಸ್ಥಾನದ ಸಮೀಪದ ಮನೆಯ ಹಿಂಭಾಗದಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ವ್ಯಕ್ತಿ ಮೃತಪಟ್ಟು ತಿಂಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ.
ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ ಬಳಿಕ ಕಳೇಬರವನ್ನು ಮಣಿಪಾಲ ಕೆ.ಎಂ.ಸಿ ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲಾಯಿತು.

ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಅಸ್ಥಿಪಂಜರದ ಸಾಗಟ ನಡೆಸಲು ಇಲಾಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಿ ನೆರವಾದರು. ಅಸ್ಥಿ ಪಂಜರ ಪತ್ತೆಯಾಗಿರುವ ಸ್ಥಳದ ಮಾಲೀಕರು ಮುಂಬೈಯಲ್ಲಿ ವಾಸವಾಗಿದ್ದು, ಅವರು ಊರಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಘಟನ ಸ್ಥಳಕ್ಕೆ ಡಿ.ವೈ.ಎಸ್.ಪಿ- ಟಿ.ಡಿ ಪ್ರಭು, ಉಡುಪಿ ಉಪ ವಿಭಾಗ, ಡಿ.ವಿ. ದೇವರಾಜ್ ಸರ್ಕಲ್ ಇನ್ಸ್‌ಪೆಕ್ಟರ್, ಪಿ.ಎಸ್ ಐ ರಾಘವೇಂದ್ರ ಭೇಟಿ ನೀಡಿ ಪರಿಶೀಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು