ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಂಗಳೂರಿನಲ್ಲಿ ಸೋಮವಾರ ಭೇಟಿ ಮಾಡಿ ಶುಭಕೋರಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನಲ್ಲಿ ಮಳೆಗಾಲ ಸಮಯದಲ್ಲಿ ಉಂಟಾಗುವ ಕಡಲ್ಕೊರೆತ ಮತ್ತು ನೆರೆ ಪೀಡಿತ ಪ್ರದೇಶಗಳ ಬಗ್ಗೆ ಚರ್ಚಿಸಿ ಅಧಿಕಾರಿಗಳಿಗೆ ಸೂಚನೆ ನೀಡಿ ಕೂಡಲೇ ಸೂಕ್ತ ಕ್ರಮಕೈಕೊಳ್ಳುವಂತೆ ಹಾಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು..