News Karnataka Kannada
Saturday, May 04 2024
ಉಡುಪಿ

ಮರವಂತೆ ಸಿಆರ್ ಝಡ್ ಕ್ಲಿಯರೆನ್ಸ್‍ಗೆ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಸಚಿವರಿಗೆ ಮನವಿ

Mp B Y Raghavendra requests Union Minister for CRZ clearance in Maravanthe
Photo Credit : News Kannada

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೈಂದೂರು ತಾಲೂಕಿನ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಕೆಲಸಕ್ಕೆ ಈಗಾಗಲೇ 85 ಕೋಟಿ.ರೂ ಮಂಜೂರಾಗಿದ್ದು ಬಂದರಿನ ಕಾಮಗಾರಿ ಕೆಲಸ ಆದಷ್ಟು ಬೇಗ ಆರಂಭಿಸಲು ಸಿಆರ್ ಝಡ್ ಕ್ಲಿಯರೆನ್ಸ್ ನೀಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೆಂದ್ರ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಸರ್ಬಾನಂದ್ ಸೋನುವಾಲ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿಯನ್ನು ಮಾಡಿದ್ದಾರೆ.

ಇತ್ತೀಚಿಗೆ ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಇಬ್ಬರು ಮೀನುಗಾರರು ಮೃತಪಟ್ಟ ವಿಷಯವನ್ನು ಕೇಂದ್ರ ಸಚಿವರ ಗಮನಕ್ಕೆ ತಂದ ಸಂಸದರು ದೋಣಿಗಳ ಸುರಕ್ಷಿತ ಇಳಿದಾಣಕ್ಕೆ ಹಾಗೂ ಮೀನುಗಾರರ ಸುರಕ್ಷತೆ ದೃಷ್ಟಿಯಿಂದ ಉಪ್ಪುಂದದಲ್ಲಿ ಬ್ರೇಕ್ ವಾಟರ್ ಹಾಗೂ ಕಿರು ಬಂದರು ಮಂಜೂರು ಮಾಡುವಂತೆ ಮನವಿಯನ್ನು ಸಲ್ಲಿಸಿದರು.

ಬೈಂದೂರಿನಲ್ಲಿ 228.78 ಕೋಟಿ.ರೂ ವೆಚ್ಚದಲ್ಲಿ ಮಲ್ಟಿಪರ್ಪಸ್ ಹಾರ್ಬರ್ ಸ್ಥಾಪನೆಗೆ ಖಾಸಗಿ ಸಹಭಾಗಿತ್ವದಲ್ಲಿ ಟೆಂಡರ್ ಕರೆಯಲಾಗಿದ್ದು, ಯಾವುದೇ ಕಂಪನಿಗಳು ಸದರಿ ಟೆಂಡರ್ ಪ್ರಕ್ರಿಯೆಲ್ಲಿ ಭಾಗವಹಿಸಿರಲಿಲ್ಲ.ಯೋಜನೆಗಳಿಗೆ ಬ್ರೇಕ್‍ವಾಟರ್ ಮತ್ತು ಬರ್ತಿಂಗ್ ಸೌಲಭ್ಯಗಳ ಮೇಲೆ ಹೆಚ್ಚಿನ ಬಂಡವಾಳ ವೆಚ್ಚದ ಅಗತ್ಯವಿರುವುದರಿಂದ ಒಟ್ಟು ಯೋಜನಾ ವೆಚ್ಚಕ್ಕೆ ಪಿಪಿಪಿ ಕಾರ್ಯಸಾಧ್ಯವಾವುದಿಲ್ಲ ಎಂದು ಕೇಂದ್ರ ಸಚಿವರಿಗೆ ವಿವರಣೆ ನೀಡಿದ ಸಂದರು ಸದರಿ ಯೋಜನೆಗಳಿಗೆ 228.78 ಕೋಟಿ ಅವಶ್ಯಕತೆ ಇದ್ದು ಸರಕಾರ ಖುದ್ದಾಗಿ ಕಾಮಗಾರಿ ಕೆಲಸವನ್ನು ಕೈಗೆತ್ತಿಕೊಳ್ಳಬೇಕೆಂದು ವಿನಂಸಿದರು.ಈ ಬಗ್ಗೆ ಸಕಾರಾತ್ಮಕವಾಗಿ ಕೇಂದ್ರ ಸಚಿವರು ಸ್ಪಂದಿಸಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು