News Karnataka Kannada
Monday, May 06 2024
ಉಡುಪಿ

ಪೊಲೀಸ್ ಮಾಹಿತಿದಾರನ ಅಪಹರಣ, ಹತ್ಯೆ ಪ್ರಕರಣ; ನಕ್ಸಲೈಟ್ ಶ್ರೀಮತಿಯನ್ನು ಕರೆತಂದ ಪೊಲೀಸರು

ಕಾರ್ಕಳಕ್ಕೆ ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯನನ್ನು ಪೊಲೀಸರು ಕರೆತಂದಿದ್ದಾರೆ.
Photo Credit : News Kannada

ಉಡುಪಿ: ಕಾರ್ಕಳಕ್ಕೆ ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯನನ್ನು ಪೊಲೀಸರು ಕರೆತಂದಿದ್ದಾರೆ.

2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧಿಸಿದಂತೆ ಸ್ಥಳ ಮಹಜರು ಮಾಡಲು ಶ್ರೀಮತಿಯನ್ನು ಕಾರ್ಕಳಕ್ಕೆ ಕರೆತರಲಾಗಿದೆ.

ಹಲವು ವರ್ಷಗಳಿಂದ ಕರ್ನಾಟಕ ಮತ್ತು ಕೇರಳ ರಾಜ್ಯದ ಪೊಲೀಸರಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ನಕ್ಸಲ್ ನಾಯಕಿ ಮೂಲತಃ ಶೃಂಗೇರಿ ನಿವಾಸಿ ಶ್ರೀಮತಿ ಅಲಿಯಾಸ್ ಉಣ್ಣಿಮಾಯಾ(28) ಕಳೆದ ನವೆಂಬರ್ 7 ರಂದು ಕೇರಳ ಪೊಲೀಸರಿಗೆ ಸೆರೆಸಿಕ್ಕಿದ್ದಳು. ನಂತರ ಈಕೆ ಕೇರಳ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಳು. ಈಕೆ ಕೇರಳದ ವಯನಾಡು ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸೆರೆಯಾಗಿದ್ದಳು.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಳಗೋಡುಕೊಡಿಗೆ ನಿವಾಸಿಯಾಗಿರುವ ಶ್ರೀಮತಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಆ್ಯಕ್ಟಿವ್ ಆಗಿದ್ದಳು. ಸದಾಶಿವ ಗೌಡ ಹತ್ಯೆ ನಡೆಸಿದ ಕಾರ್ಕಳ ವ್ಯಾಪ್ತಿಯ ಕಬ್ಬಿನಾಲೆಗೆ ಬಾಡಿ ವಾರೆಂಟ್ ಮೇಲೆ ಶ್ರೀಮತಿಯನ್ನು ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಶ್ರೀಮತಿ ಕರೆ ತಂದು ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ. ಶ್ರೀಮತಿ ಮೇಲೆ ರಾಜ್ಯದ ಹಲವು ಠಾಣೆಗಳಲ್ಲಿ 9 ಪ್ರಕರಣಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು