ಉಡುಪಿ: ಕರ್ನಾಟಕ ಚುನಾವಣೆಯ ನಿಖರ ಫಲಿತಾಂಶ ನುಡಿಯುವ ಜ್ಯೋತಿಷಿಗಳಿಗೆ 10 ಲಕ್ಷ ರೂ ಬಹುಮಾನ ನೀಡಲಾಗುತ್ತದೆ ಎಂದು ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ (ಎಫ್ಐಆರ್ಎ)ದ ಅಧ್ಯಕ್ಷ, ಮಂಗಳೂರಿನ ಡಾ.ನರೇಂದ್ರ ನಾಯಕ್ ಘೋಷಣೆ ಮಾಡಿದ್ದಾರೆ.
ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ (ಎಫ್ಐಆರ್ಎ)ದ ಅಧ್ಯಕ್ಷ, ಮಂಗಳೂರಿನ ಡಾ.ನರೇಂದ್ರ ನಾಯಕ್ ಅವರು ಈ ಬಾರಿ ವಿಧಾನಸಭೆ ಚುನಾವಣಾ ಫಲಿತಾಂಶದ ವಿಚಾರದಲ್ಲಿ ಜ್ಯೋತಿಷಿಗಳಿಗೆ 10 ಲಕ್ಷ ರೂ. ಬಹುಮಾನದ ಸವಾಲು ಒಡ್ಡಿದ್ದು, ಸವಾಲಿನಲ್ಲಿ 20 ಪ್ರಶ್ನೆಗಳನ್ನು ನೀಡಿರುವ ಅವರು ಈ ಪ್ರಶ್ನೆಗಳಿಗೆ ನಿಖರ ಉತ್ತರ ಹೇಳುವ ಜ್ಯೋತಿಷಿಗಳಿಗೆ 10 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅದರಂತೆ ಈಗಾಗಲೇ 20ಕ್ಕೂ ಹೆಚ್ಚು ಜ್ಯೋತಿಷಿಗಳು ಅಂಚೆ ಮೂಲಕ ಫಲಿತಾಂಶದ ಉತ್ತರ ಬರೆದು ಕಳುಹಿಸಿದ್ದಾರೆ.