ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66ರ ಅಭಿವೃದ್ಧಿ ಕಾಮಗಾರಿ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹರಿಯುತ್ತಿದ್ದ ಚರಂಡಿ ನೀರಿನ ಹರಿವನ್ನು ಹೊಸಾಡು ಬೈಲಿಗೆ ಸಂಪರ್ಕ ಕಲ್ಪಿಸುವ ತೋಡಿಗೆ ನೀಡಿದ್ದರಿಂದ ಪ್ರತಿ ಮಳೆಗಾಲದಲ್ಲಿಯೂ ಹೊಸಾಡು ಬೈಲು ಚರಂಡಿ ನೀರಿನಿಂದ ಮುಳುಗುತ್ತಿದೆ.
ರಾಷ್ಟ್ರೀಯ ಹೆದ್ದಾರಿ ಚರಂಡಿ ನೀರಿನ ಹರಿವನ್ನು ಅರಾಟೆ ಸೌಪರ್ಣಿಕಾ ನದಿಗೆ ಹರಿಸಲು ಕ್ರಮ ಕೈಗೊಳ್ಳಬೇಕ್ಕೆನ್ನುವ ರೈತರ ಕೂಗಿಗೆ ಕಳೆದ ಎರಡು ವರ್ಷಗಳಿಂದ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದನೆ ಮಾಡಿಲ್ಲ ಎಂದು ರೈತರು ದೂರಿದ್ದಾರೆ.
ಮಳೆ ಆರಂಭವಾಗುವ ಮುನ್ನವೇ ರಾಷ್ಟ್ರೀಯ ಹೆದ್ದಾರಿ ಚರಂಡಿ ನೀರಿನ ಹರಿವನ್ನು ಸೌಪರ್ಣಿಕಾ ನದಿಗೆ ಹರಿಸಲು ಕ್ರಮಗಳನ್ನು ಕೈಗೊಳ್ಳಬೇಕ್ಕೆಂದು ಕೃಷಿಕರು ಆಗ್ರಹಿಸಿದ್ದಾರೆ.