News Karnataka Kannada
Monday, May 20 2024
ಉಡುಪಿ

ನೆಜಾರ್ ನಾಲ್ವರ ಹತ್ಯೆ ಪ್ರಕರಣ: ಕೊಲೆ ಹಿಂದಿನ ಕಾರಣ ಬಿಚ್ಚಿಟ್ಟ ಉಡುಪಿ ಎಸ್​ಪಿ

Nejar four murder case: Udupi SP reveals the reason behind the murder
Photo Credit : News Kannada

ಉಡುಪಿ: ನೆಜಾರ್ ನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆ ವೇಳೆ ಕೊಲೆ ಮಾಡಲು ಏನು ಕಾರಣ ಎಂಬ ಅಂಶಗಳನ್ನು ಆರೋಪಿ ಪ್ರವೀಣ್ ಹೇಳಿದ್ದಾನೆ.

ಮೃತ ಅಯ್ನಾಝ್ ವಿಚಾರದಲ್ಲಿ ಆರೋಪಿ ಪ್ರವೀಣ್ ಚೌಗುಲೆ ಬಹಳ ಪಾಸೆಸಿವ್ ಆಗಿದ್ದನು. ಅಯ್ನಾಝ್​ಳನ್ನು ಅತಿಯಾಗಿ ಹಚ್ಚಿಕೊಂಡಿದ್ದನು. ಅಯ್ನಾಝ್ ತನ್ನ ನಿಯಂತ್ರಣದಲ್ಲೇ ಇರಬೇಕು ಎಂಬ ಮನಸ್ಥಿತಿ ಹೊಂದಿದ್ದನು. ಅಸೂಯೆ ಮತ್ತು ದ್ವೇಷದಿಂದ ಅಯ್ನಾಝ್​ಳನ್ನು ಕೊಲೆ ಮಾಡಲು ನಿರ್ಧರಿಸಿದ್ದನು. ಅಯ್ನಾಝ್ ತನ್ನ ಜೊತೆ ಮಾತ್ರ ಮಾತನಾಡಬೇಕು ಎಂಬ ನಿಯಮ ಹಾಕುತ್ತಿದ್ದನು, ನನ್ನ ಜೊತೆ ಮಾತ್ರ ಬೆರೆಯಬೇಕು ಎಂಬ ಮನಸ್ಥಿತಿಯನ್ನು ಹೊಂದಿದ್ದನು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಡಾ.ಅರುಣ್ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೃತರ ಮನೆಗೆ ಭೇಟಿ ನೀಡಿ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕುಟುಂಬದ ನಾಲ್ಕು ಸದಸ್ಯರನ್ನು ಅಮಾನುಷವಾಗಿ ಕೊಂದಿದ್ದಾನೆ, ರಾಕ್ಷಸ ಕೃತ್ಯ ಎಸಗಿದ್ದಾನೆ. ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ. ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ. ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಪಡುತ್ತೇವೆ ಎಂದು ಭರವಸೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು