News Karnataka Kannada
Sunday, April 28 2024
ಉಡುಪಿ

ನೇಜಾರು ಕಗ್ಗೊಲೆ ಕೇಸ್‌: ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಲಯಕ್ಕೆ ಹಾಜರು

ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬುಧವಾರ ಉಡುಪಿ ಜಿಲ್ಲಾ ಎರಡನೇ ಹೆಚ್ಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು
Photo Credit : NewsKarnataka

ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬುಧವಾರ ಉಡುಪಿ ಜಿಲ್ಲಾ ಎರಡನೇ ಹೆಚ್ಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿ ಯಾಗಿರುವ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಕೃಷ್ಣ ಎಸ್.ಕೆ. ನ್ಯಾಯಾಲಯಕ್ಕೆ ಕರೆತಂದರು. ಬಳಿಕ ಆರೋಪಿ ಮೇಲೆೆ ಆಪಾದನೆ ವಾಚಿಸುವ ಪ್ರಕ್ರಿಯೆ ನಡೆಯಿತು. ನ್ಯಾಯಾಧೀಶ ದಿನೇಶ್ ಹೆಗ್ಡೆ ಆಪಾದನೆ ವಾಚಿಸುವ ಪ್ರಕ್ರಿಯೆಯನ್ನು ನಡೆಸಿದರು. ಬಳಿಕ ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಜೈಲಿಗೆ ಕರೆದೊಯ್ಯಲಾಯಿತು. ಈ ಸಂದರ್ಭದಲ್ಲಿ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವ ಪ್ರಸಾದ್ ಆಳ್ವ ಹಾಜರಿದ್ದರು. ಭದ್ರತೆ ಉಸ್ತುವಾರಿಯನ್ನು ಪ್ರಭು ಡಿ.ಟಿ. ವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು