News Karnataka Kannada
Thursday, May 09 2024
ಉಡುಪಿ

ನೇಜಾರು ಕೊಲೆ ಪ್ರಕರಣ: ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಅಬ್ದುಲ್ ಅಜೀಮ್

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಅಧ್ಯಕ್ಷ ಅಬ್ದುಲ್ ಅಜೀಮ್ ಅವರು ತಾಯಿ ಮತ್ತು‌ ಮಕ್ಕಳ ಕೊಲೆಯಾದ ನೇಜಾರಿನ ಮನೆಗೆ ಇಂದು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
Photo Credit : News Kannada

ಉಡುಪಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಅಧ್ಯಕ್ಷ ಅಬ್ದುಲ್ ಅಜೀಮ್ ಅವರು ತಾಯಿ ಮತ್ತು‌ ಮಕ್ಕಳ ಕೊಲೆಯಾದ ನೇಜಾರಿನ ಮನೆಗೆ ಇಂದು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಕುಟುಂಬದ ಯಜಮಾನ ನೂರ್ ಮೊಹಮ್ಮದ್ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ದುಲ್ ಅಜೀಮ್ ಅವರು, ಇದೊಂದು ಅಪರೂಪದ ಪ್ರಕರಣವೆಂದು ಸರಕಾರ ಪರಿಗಣಿಸಬೇಕು. ಹೀಗಾಗಿ ವರ್ಷದೊಳಗೆ ಪ್ರಕರಣದ ವಿಚಾರಣೆ ಮುಗಿಸಿ ಆರೋಪಿಗೆ ಮರಣದಂಡನೆ ವಿಧಿಸುವಂತಾಗಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಶಿಫಾರಸು ಮಾಡಲಾಗುವುದು ಎಂದರು.

ಪ್ರಕರಣದ ಬಗ್ಗೆ ಪೊಲೀಸರು ಕೂಲಂಕಷವಾಗಿ ತನಿಖೆ ನಡೆಸಿ ಆರೋಪಿಗೆ ಮರಣದಂಡನೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಮೃತ ಐನಾಝ್ ಸಹೋದರ ಅಸಾದ್ ಅವರನ್ನು ಅನುಕಂಪದ ಆಧಾರದ ಮೇಲೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಸರಕಾರ ನೇರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಎಂ.ಎ. ಗಫೂರ್, ಕುಟುಂಬದ ಸದಸ್ಯರಾದ ಅಶ್ರಫ್ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು