News Karnataka Kannada
Saturday, April 27 2024
ಉಡುಪಿ

ಹೆದ್ದಾರಿ ನಡುವೆ ಮೃತ್ಯುಕೂಪ: ದುರಸ್ತಿಗೆ ಆಗ್ರಹಿಸಿದ ನಿತ್ಯಾನಂದ ಒಳಕಾಡು

ನಿಟ್ಟೂರು ಹುಂಡೈ ಶೋರೂಮ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಳಪೆ ಕಾಮಗಾರಿಯಿಂದ ಬೃಹತ್ ಗುಂಡಿಯೊಂದು ಬಿದ್ದಿದ್ದು, ಇದು ವಾಹನ ಸವಾರರಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ.
Photo Credit : News Kannada

ಉಡುಪಿ: ನಿಟ್ಟೂರು ಹುಂಡೈ ಶೋರೂಮ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಳಪೆ ಕಾಮಗಾರಿಯಿಂದ ಬೃಹತ್ ಗುಂಡಿಯೊಂದು ಬಿದ್ದಿದ್ದು, ಇದು ವಾಹನ ಸವಾರರಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ.

ಹೆದ್ದಾರಿಯ ಉದ್ದಕ್ಕೂ ಅಲ್ಲಾಲ್ಲಿ ಗುಂಡಿಗಳು ಉದ್ಭವವಾಗಿವೆ. ರಸ್ತೆಯಲ್ಲಿ ಎತ್ತರ ತಗ್ಗು ಇರುವುದರಿಂದ ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ಎಡವಿ ಬೀಳುತ್ತಿದ್ದಾರೆ. ಇತ್ತೀಚೆಗೆ ಓರ್ವ ಯುವಕ ಎಡವಿ ಬಿದ್ದು ಮೃತಪಟ್ಟಿದ್ದಾನೆ.

ಹೆದ್ದಾರಿಯ ಚರಂಡಿ ಕುಸಿಯುವ ಹಂತದಲ್ಲಿದೆ. ಕೂಡಲೇ ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ತಕ್ಷಣ ಸಮಸ್ಯೆಯನ್ನು ಪರಿಹರಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು