ಉಡುಪಿ: ವಿಪಕ್ಷ ನಾಯಕ ಆಯ್ಕೆಯಾಗಿಲ್ಲ ಎಂದು ಯಾರು ಖುಷಿಪಡುವುದು ಬೇಡ. ಇನ್ನೊಂದೆರಡು ಮೂರು ದಿನಗಳಲ್ಲಿ ಆಯ್ಕೆ ಆಗಬಹುದು. ವಿಪಕ್ಷವಾಗಿ ನಾವು ಸರ್ಕಾರವನ್ನು ತುದಿಗಾಲಲ್ಲಿ ನಿಲ್ಲಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆಯ್ಕೆ ಹೈಕಮಾಂಡ್ ಗೆ ಬಿಟ್ಟ ವಿಚಾರ. ಕೆಲವು ಕಾರಣಗಳಿಗೋಸ್ಕರ ವಿಳಂಬ ಆಗಿರ ಬಹುದು. ಅಧಿಕೃತ ನಾಯಕ ಇಲ್ಲದೆ ಇರಬಹುದು. ಆದರೆ, 66 ಶಾಸಕರಿದ್ದಾರೆ, 34 ಜನ ಮೇಲ್ಮನೆ ಶಾಸಕರಿದ್ದಾರೆ. ಎಲ್ಲಾ ಶಾಸಕರು ಒಟ್ಟಾಗಿ ಒಂದಾಗಿ ವಿಪಕ್ಷದ ಕೆಲಸ ಮಾಡುತ್ತಿದ್ದೇವೆ ಎಂದ್ರು.
ಬಿಜೆಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕರ ಯಾವ ಮಾಹಿತಿ ಆಧಾರದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿ ಯಾವ ಶಾಸಕರಿಗೂ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ರು.