News Karnataka Kannada
Thursday, May 02 2024
ಉಡುಪಿ

ವಿಪಕ್ಷ ನಾಯಕ ಆಯ್ಕೆಯಾಗಿಲ್ಲವೆಂದು ಯಾರು ಖುಷಿಪಡುವುದು ಬೇಡ: ಕೋಟ ಶ್ರೀನಿವಾಸ ಪೂಜಾರಿ

No one should be happy that opposition leader has not been elected: Kota Srinivas Poojary
Photo Credit : Twitter

ಉಡುಪಿ: ವಿಪಕ್ಷ ನಾಯಕ ಆಯ್ಕೆಯಾಗಿಲ್ಲ ಎಂದು ಯಾರು ಖುಷಿಪಡುವುದು ಬೇಡ. ಇನ್ನೊಂದೆರಡು ಮೂರು ದಿನಗಳಲ್ಲಿ ಆಯ್ಕೆ ಆಗಬಹುದು. ವಿಪಕ್ಷವಾಗಿ ನಾವು ಸರ್ಕಾರವನ್ನು ತುದಿಗಾಲಲ್ಲಿ ನಿಲ್ಲಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆಯ್ಕೆ ಹೈಕಮಾಂಡ್ ಗೆ ಬಿಟ್ಟ ವಿಚಾರ. ಕೆಲವು ಕಾರಣಗಳಿಗೋಸ್ಕರ ವಿಳಂಬ ಆಗಿರ ಬಹುದು. ಅಧಿಕೃತ ನಾಯಕ ಇಲ್ಲದೆ ಇರಬಹುದು. ಆದರೆ, 66  ಶಾಸಕರಿದ್ದಾರೆ, 34 ಜನ ಮೇಲ್ಮನೆ ಶಾಸಕರಿದ್ದಾರೆ. ಎಲ್ಲಾ ಶಾಸಕರು ಒಟ್ಟಾಗಿ ಒಂದಾಗಿ ವಿಪಕ್ಷದ ಕೆಲಸ ಮಾಡುತ್ತಿದ್ದೇವೆ ಎಂದ್ರು.

ಬಿಜೆಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕರ ಯಾವ ಮಾಹಿತಿ ಆಧಾರದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿ ಯಾವ ಶಾಸಕರಿಗೂ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು