ಕುಂದಾಪುರ: ಬೈಂದೂರು ಬಿಜೆಪಿ ಮಂಡಲದ ವತಿಯಿಂದ ಹೆಮ್ಮಾಡಿ ಜಯಶ್ರೀ ಸಭಾಭವನದಲ್ಲಿ ಭಾನುವಾರ ನಡೆದ ‘ನನ್ನ ವಾರ್ಡಿಗೆ ನಾನೇ ನಾಯಕ’ ವಾರ್ಡ್ ವಾರಿಯರ್ಸ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಭಾಷಣಕ್ಕೆ ಕಾಂಗ್ರ್ರೆಸ್ ಪಕ್ಷದವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಟ್ವಿಟರ್ ನಲ್ಲಿ ಸ್ಪಷ್ಟನೆಯನ್ನು ನೀಡಿದ್ದಾರೆ.
ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಹೇಳಿಯನ್ನು ಖಂಡಿಸಿ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಕೆ.ಗೋಪಾಲ ಪೂಜಾರಿ ಅವರು 28 ವರ್ಷದ ಸಾಮಾಜಿಕ ಹಾಗೂ ರಾಜಕೀಯ ಜೀವನದಲ್ಲಿ ನನ್ನ ಯಾವ ಕಾರ್ಯಗಳಲ್ಲಿ ನೀವು ಭಯೋತ್ಸಾದನೆ ಕಂಡಿದ್ದೀರಿ ಕೋಟ ಶ್ರೀನಿವಾಸ ಪೂಜಾರಿ ಅವರೆ ಎಂದು ಪ್ರಶ್ನೆ ಮಾಡಿದ್ದರು.
ಕೆ.ಗೋಪಾಲ ಪೂಜಾರಿ ಅವರು ಕೇಳಿದ ಪ್ರಶ್ನೆಗೆ ಟ್ವಿಟರ್ ನಲ್ಲಿ ಉತ್ತರಿಸಿದ ಶ್ರೀನಿವಾಸ ಪೂಜಾರಿ ಅವರು ನಿಮ್ಮ ಮೇಲೆ ವೈಯಕ್ತಿಕವಾಗಿ ಯಾವುದೇ ಆರೋಪ ಮಾಡಿಲ್ಲ, ಮಾಡುವುದಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಆಪಾದಿಸಿದ್ದೆ. ಕಾಂಗ್ರೆಸ್ ಬಗ್ಗೆ ನನ್ನ ಮಾತನ್ನು ಈಗಲೂ ಸಮರ್ಥಿಸುತ್ತೇನೆ. ಸಂಬಂಧವೇ ಇಲ್ಲದ ವಿಚಾರಗಳನ್ನು ಸೃಷ್ಟಿಸಿ ಆಡುವುದು ಯಾರ ಗೌರವವನ್ನೂ ಹೆಚ್ಚಿಸುವುದಿಲ್ಲ ಕೆ.ಗೋಪಾಲ ಪೂಜಾರಿ ಅವರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮವರ ಜತೆ ಮಾತನಾಡಿದ ಶ್ರೀನಿವಾಸ ಪೂಜಾರಿ ಅವರು ಇದು ಗೋಪಾಲ ಪೂಜಾರಿ ಮತ್ತು ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ನಡುವೆ ನಡೆಯುವ ಚುನಾವಣೆ ಅಲ್ಲಾ ಬದಲಾಗಿ ಈ ಚುನಾವಣೆ ರಾಷ್ಟ್ರ ಭಕ್ತರ ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುವ ಪಕ್ಷಗಳ ನಡುವಿನ ಚುನಾವಣೆ ಆಗಿದೆ ಎಂದು ಪುನರ್ ಉಚ್ಚರಿಸಿದರು.