ಉಡುಪಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಸೋಮವಾರದಿಂದ ಕಾಲೇಜುಗಳು ಮತ್ತೆ ಆರಂಭವಾಗಿದ್ದು, ಮಂಗಳವಾರದಿಂದ ಶಾಲೆಗಳೂ ತೆರೆಯಲಿವೆ. ಆದರೆ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ಪರಿಸ್ಥಿತಿ ಆಧರಿಸಿ ಸ್ಥಳೀಯವಾಗಿ ರಜೆ ಘೋಷಣೆಗೆ ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶದಲ್ಲಿ ತಿಳಿಸಿದ್ದಾರೆ.
ತೋಡು, ಹಳ್ಳ ಮೊದಲಾದ ಕಠಿನ ದಾರಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಮನೆಯಲ್ಲಿ ಸುರಕ್ಷಿತವಾಗಿರಲು ಸೂಚಿಸುವುದು, ಶಿಥಿಲ, ದುರ್ಬಲ ಕಟ್ಟಡದಲ್ಲಿ ಪಾಠ ಮಾಡುವಂತಿಲ್ಲ. ಪರಿಸ್ಥಿತಿ ಅವಲೋಕಿಸಿ, ಸ್ಥಳೀಯರವಾಗಿ ರಜೆ ಘೋಷಣೆ ಮಾಡಬಹುದು. ಈಗಾಗಲೇ ರಜೆ ನೀಡಿ ವ್ಯತ್ಯಯವಾಗಿರುವ ಕಲಿಕಾ ತರಗತಿಯನ್ನು ಶನಿವಾರ, ರವಿವಾರ ತರಗತಿ ನಡೆಸಿ ಸರಿದೂಗಿಸುವುದು.
ಶಾಲಾವರಣದಲ್ಲಿ ಅಪಾಯಕಾರಿ ಮರಗಳಿದ್ದಲ್ಲಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ತೆರವುಗೊಳಿಸಲು ಕ್ರಮವಹಿಸಲು ಶಾಲಾಡಳಿತ ಮಂಡಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.