ಉಡುಪಿ: ನೇಜಾರು ತಾಯಿ ಹಾಗೂ ಮೂರು ಮಕ್ಕಳ ಕೊಲೆ ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು.
ವಿಶೇಷ ಸರಕಾರಿ ಅಭಿಯೋಜಕರಾಗಿ ಅಡ್ವಕೇಟ್ ಶಿವಪ್ರಸಾದ್ ಆಳ್ವ ಅವರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ನೀಡಿದ್ದೇವೆ ಎಂದು ಕುಟುಂಬದ ಯಜಮಾನ ನೂರ್ ಮೊಹಮ್ಮದ್ ಹೇಳಿದರು.
ಕೊಲೆ ನಡೆದ ನೇಜಾರಿನ ಮನೆಗೆ ಇಂದು ಸಚಿವರು ಭೇಟಿಕೊಟ್ಟಿದ್ದು, ಈ ಸಂದರ್ಭದಲ್ಲಿ ಮನವಿ ಕೊಟ್ಟಿದ್ದೇವೆ. ಉಸ್ತುವಾರಿ ಸಚಿವರು ಮನವಿ ಸ್ವೀಕಾರ ಮಾಡಿದ್ದಾರೆ. ಬೇಗ ನ್ಯಾಯ ಕೊಡಿಸುವ ವಿಶ್ವಾಸ ಕೊಟ್ಟಿದ್ದಾರೆ. ಎಲ್ಲ ರೀತಿಯಲ್ಲಿ ಸಹಕಾರ ಕೊಡುವ ಆಶ್ವಾಸನೆಯನ್ನು ನೀಡಿದ್ದಾರೆ ಎಂದರು.