ಕಾರ್ಕಳ: ಸರಕಾರಿ ಯಂತ್ರಗಳು ಸಾಮಾಜಿಕ ನ್ಯಾಯವನ್ನು ಕೊಡುವಲ್ಲಿ ಪ್ರಾಮಾಣಿಕವಾಗಿ ಸ್ಪಂದಿಸಬೇಕಾಗಿದೆ. ಯಾರದ್ದೇ ಒತ್ತಡ ಇಲ್ಲದೆ ನಿರ್ಭಯವಾಗಿ ಕರ್ತವ್ಯ ನಿರ್ವಹಿಸಬೇಕಾಗಿದೆ. ಎಂದು ಪುರಸಭಾ ಸದಸ್ಯ ಕಾಂಗ್ರೇಸ್ ವಕ್ತಾರ ಶುಭದರಾವ್ ತಿಳಿಸಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ ಕಲೆಕ್ಷನ್ ಮತ್ತು ಕಮಿಷನ್ ಆಡಳಿತವಿದ್ದು, ಅಧಿಕಾರಿಗಳು ಬಾರೀ ತೊಂದರೆ ಪಡುವಂತಾಗಿತ್ತು. ಎಲ್ಲಾ ಇಲಾಖೆಯ ಅಧಿಕಾರಿಗಳು ಒತ್ತಡಕ್ಕೆ ಬಲಿ ಬಿದ್ದು ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿಯಿತ್ತು.ಆದರೆ ಇವೆಲ್ಲವುಗಳಿಗೆ ಈಗ ಮುಕ್ತಿ ಸಿಕ್ಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದ್ದು, ಜನತೆಯ ಆಶಯಗಳಿಗೆ ಸ್ಪಂದಿಸಲಿದೆ ಎಂದರು.
ಅಧಿಕಾರಿಗಳಾಗಲೀ ಜನತೆಯಾಗಲೀ ಒತ್ತಡಕ್ಕೆ ಬಲಿಬೀಳುವ ಪ್ರಶ್ನೆಯೇ ಎದುರಾಗುವುದಿಲ್ಲ ಯಾವುದೇ ಇಲಾಖೆಯ ಅಧಿಕಾರಿಗಳು ಕರ್ತವ್ಯಲೋಪ ಎಸಗಬಾರದು. ಸರಕಾರದ ಸವಲತ್ತುಗಳನ್ನು ಜನತೆಗೆ ಮುಟ್ಟಿಸುವಲ್ಲಿ ತಾರತಮ್ಯ ಎಸಗಬಾರದು. ಮಾನ್ಯ ಮುಖ್ಯಮಂತ್ರಿಗಳ ಆದೇಶದಂತೆ, ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬರನ್ನು ಸಂಪರ್ಕಿಸಿ ಸರಕಾರದ ಸವಲತ್ತುಗಳನ್ನು ಮುಟ್ಟಿಸುವ ಕೆಲಸ ಜತೆಗೆ, ಸವಲತ್ತುಗಳನ್ನು ಪಡೆಯುವಲ್ಲಿ ಸೂಕ್ತ ಮಾರ್ಗದರ್ಶನವನ್ನು ಕೂಡಾ ನೀಡಬೇಕು ಒಂದು ವೇಳೆ ಯಾರದರೂ ರಾಜಕೀಯ ಒತ್ತಡ ಬಳಸಿ ಕಿರುಕುಳ ನೀಡಿದ್ದಲ್ಲಿ ನಮ್ಮಗಮನಕ್ಕೆ ತನ್ನಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ಜತೆ ನಾವಿದ್ದೇವೆ ಎಂದು ಕಾಂಗ್ರೆಸ್ ವಕ್ತಾರ
ಶುಭದ ರಾವ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.