ಮಲ್ಪೆ: ಜಿಲ್ಲಾಡಳಿತ, ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ, ಕರ್ನಾಟಕ ಸ್ವಿಮ್ಮಿಂಗ್ ಅಸೋಸಿಯೇಷನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಜತ ಉಡುಪಿ- ಬೀಚ್ ಉತ್ಸವ ಪ್ರಯುಕ್ತ ನಡೆದ ರಾಷ್ಟ್ರ ಮಟ್ಟದ ಒಪೆನ್ ವಾಟರ್ ಸ್ವಿಮ್ಮಿಂಗ್ ಸ್ಪರ್ಧೆ ಕಾರ್ಯಕ್ರಮಕ್ಕೆ ಮಲ್ಪೆ ಬೀಚ್ ನಲ್ಲಿ ಇಂದು ಚಾಲನೆ ನೀಡಲಾಯಿತು.
ಈಜು ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ರಘುಪತಿ ಭಟ್ ಅವರು, ಉಡುಪಿ ಜಿಲ್ಲೆಯಲ್ಲಿ ಪ್ರತಿಭಾವಂತ ಈಜು ಪಟುಗಳಿದ್ದು, ರಾಷ್ಟಮಟ್ಟ ಈಜು ಸ್ಪರ್ಧೆಯನ್ನು ಮಲ್ಪೆಯಲ್ಲಿ ಆಯೋಜಿಸುವ ಮೂಲಕ ಸ್ಥಳಿಯ ಪ್ರತಿಭೆಗೆ ಪ್ರೋತ್ಸಾಹ ದೊರೆಯಲಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಎಸ್ಪಿ ಹಾಕೆ ಅಕ್ಷಯ್ ಮಚಿಂದ್ರ, ಕರ್ನಾಟಕ ಸ್ವಿಮ್ಮಿಂಗ್ ಅಸ್ಸೋಸಿಯೇಷನ್ ಅಧ್ಯಕ್ಷ ಗೋಪಾಲ್ ಹೊಸೂರು, ಕೆನರಾ ಬ್ಯಾಂಕ್ ಪ್ರಬಂಧಕ ರಾಮ ನಾಯಕ್, ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ್ ಶೆಟ್ಟಿ ಇದ್ದರು. ಕರ್ನಾಟಕ ಸ್ವಿಮ್ಮಿಂಗ್ ಅಸೋಸಿಯೇಷನ್ ನ ಸತೀಶ್ ಸ್ವಾಗತಿಸಿ, ನಿರೂಪಿಸಿದರು.