News Karnataka Kannada
Thursday, May 02 2024
ಉಡುಪಿ

ಪೇಜಾವರ ಶ್ರೀಗಳಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ

Padayatra from Pejawar Seer to Neelavara Goshala
Photo Credit : News Kannada

ಉಡುಪಿ: ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮುನ್ನೂರಕ್ಕೂ ಅಧಿಕ ಶಿಷ್ಯರು ಭಕ್ತರೊಂದಿಗೆ ಇಂದು ಉಡುಪಿ ಕೃಷ್ಣಮಠದಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ ನಡೆಸಿದರು.

ಇಂದು ಬೆಳಿಗ್ಗೆ ಕೃಷ್ಣಮಠದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಯನ್ನು ಆರಂಭಿಸಿದ ಪೇಜಾವರ ಶ್ರೀಗಳು, ತನ್ನ ಏಳನೇ ವರ್ಷದ ಪಾದಯಾತ್ರೆಯನ್ನು ಯಶ್ವಸಿಯಾಗಿ ಪೂರ್ಣಗೊಳಿಸಿದರು. ಬಳಿಕ ಮಾತನಾಡಿದ ಶ್ರೀಗಳು, ನಮ್ಮ ಜೀವನವೂ ತಪಸ್ಸಾಗಬೇಕು.

ಹಾಗಾಗಬೇಕಾದರೆ ಕೇವಲ ನಮ್ಮ ಹಿತಕ್ಕಾಗಿ ಮಾತ್ರವಲ್ಲದೇ ಪರರ ಹಿತದ ಬಗ್ಗೆಯೂ ಚಿಂತಿಸಿ ಶ್ರಮಿಸಲು ಯತ್ನಿಸಬೇಕು. ಅಂಥ ಮನಸ್ಥಿತಿ ನಮ್ಮದಾಗಲು ಸಾತ್ವಿಕ ಚಿಂತನೆ ಸಾತ್ವಿಕ ಕಾರ್ಯಗಳಲ್ಲಿ ಪ್ರವೃತ್ತಿ ಭಗವಂತನಲ್ಲಿ ಭಕ್ತಿ ಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು