News Karnataka Kannada
Thursday, May 02 2024
ಉಡುಪಿ

ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ: ಶಾಸಕ ಕೆ. ರಘುಪತಿ ಭಟ್ ಬೇಸರ

Pained by the way the party was treated: Raghupathi Bhat
Photo Credit : News Kannada

ಉಡುಪಿ: ನಾನು ಪಕ್ಷದ ನಿಷ್ಟಾವಂತ ಕಾರ್ಯಕರ್ತ. ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಕೂಡ ಸ್ಪರ್ಧೆ ಮಾಡಲ್ಲ. ಟಿಕೆಟ್ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಿಲ್ಲ. ಆದರೆ ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ. ಅದೇ ಶಾಕ್‌ನಲ್ಲಿದ್ದೇನೆ ಎಂದು ಶಾಸಕ ಕೆ. ರಘುಪತಿ ಭಟ್ ಕಣ್ಣೀರು ಹಾಕಿದರು.

ಶಾಸಕ ಕೆ. ರಘುಪತಿ ಭಟ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇಂದು ಶಾಸಕರ ಮನೆಯ ಮುಂದೆ ನೂರಾರು ಸಂಖ್ಯೆಯ ಕಾರ್ಯಕರ್ತರು ಜಮಾಯಿಸಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವ ಕಾರ್ಯಕರ್ತರನ್ನು ದಾರಿ ಮಧ್ಯೆ ಬಿಡಲ್ಲ. ರೆಡ್ಡಿ ಪಕ್ಷಕ್ಕೆ ಹೋಗುತ್ತೇನೆ ಎನ್ನುವುದು ಸೀಟ್ ಗಿಟ್ಟಿಸಿಕೊಳ್ಳುವವರು ಮಾಡುವ ಹುನ್ನಾರ ಎಂದರು.

ನನಗೆ ಟಿಕೆಟ್ ಸಿಗಲ್ಲ ಎನ್ನುವ ಬಗ್ಗೆ ಕನಸು ಮನಸ್ಸಿನಲ್ಲಿ ಊಹೆ ಮಾಡಿರಲಿಲ್ಲ. ಜಾತಿಯ ಕಾರಣಕ್ಕೆ ಬದಲಾವಣೆ ಮಾಡುತ್ತಾರೆ ಎನ್ನುವ ಆಲೋಚನೆ ಇರಲಿಲ್ಲ. ಪಕ್ಷದ ನಾಯಕತ್ವ, ಮೋದಿಯ ಬಗ್ಗೆ ಬೇಸರವಿಲ್ಲ. ನಾನು ಪಾರ್ಟಿಗೆ ಇಷ್ಟರ ಮಟ್ಟಿಗೆ  ಬೇಡವಾದೆನೇ? ನನಗೆ ಟಿಕೆಟ್ ಇಲ್ಲ ಎನ್ನುವುದನ್ನು ಮಾಧ್ಯಮದಲ್ಲಿ‌ ನೋಡಿ ತಿಳಿದುಕೊಳ್ಳಬೇಕೇ? ನನ್ನನ್ನು ಕೇಳಿ ಮಾಡುತ್ತಿದ್ದರೆ ನಾನೇ ರಾಜೀನಾಮೆ ಕೊಡುತ್ತಿದ್ದೆ ಎಂದು ನೋವು ತೋಡಿಕೊಂಡರು.

ನಾನೊಬ್ಬ ಸಣ್ಣ ವ್ಯಕ್ತಿ. ನನಗೆ ಜಾತಿ ಇಲ್ಲ. 3 ಬಾರಿ ಶಾಸಕನಾದೆ. ನಾನೇ ಶಾಶ್ವತ ಅಭ್ಯರ್ಥಿ ಅಲ್ಲ ಎನ್ನುವುದು ನನಗೂ ಗೊತ್ತಿದೆ. ಸದ್ಯದ ಸ್ಥಿತಿಯಲ್ಲಿ ಸಾಮಾನ್ಯ ಕಾರ್ಯಕರ್ತ ನಿಂತರೂ ಪಕ್ಷ ಗೆಲ್ಲುವ ಸ್ಥಿತಿಯಲ್ಲಿದೆ. ಇದಕ್ಕೆ ನನ್ನ ಶ್ರಮ ಬಹಳಷ್ಟಿದೆ ಎಂದರು.
ಯಾವೊಬ್ಬ ನಾಯಕರೂ ನನಗೆ ಕಾಲ್ ಮಾಡಿ ಮಾತನಾಡಿಲ್ಲ. ನನ್ನ ಅವಶ್ಯಕತೆ ಪಕ್ಷಕ್ಕೆ ಇಲ್ಲವೇ ಎಂದು ಭಾವುಕರಾದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು