News Karnataka Kannada
Monday, May 06 2024
ಉಡುಪಿ

ಪರಶುರಾಮ ಮೂರ್ತಿ ರಿಯಾಲಿಟಿ ಚೆಕ್ ಆಗ್ರಹಿಸಿ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ಹಿಂತೆಗೆತ

Parashurama Murthy calls off hunger strike demanding reality check
Photo Credit : News Kannada

ಕಾರ್ಕಳ : ಪರಶುರಾಮ ಮೂರ್ತಿಯ ರಿಯಾಲಿಟಿ ಚೆಕ್ ಆಗ್ರಹಿಸಿ ಸಮಾನ ಮನಸ್ಕರು ತಾಲೂಕು ಕಚೇರಿ ಮುಂಭಾಗದಲ್ಲಿ ಕಳೆದ ಎಂಟು ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ವಾಪಾಸ್ ಪಡೆಯಲಾಗಿದೆ.

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಹಸೀಲ್ದಾರ್ ಮೊಬೈಲ್ ಮೂಲಕ ಪ್ರತಿಭಟನಕಾರರ ಜತೆ ಮಾತನಾಡಿದರು. ಪ್ರತಿಭಟನೆಯನ್ನು ಹಿಂಪಡೆಯಬೇಕು ಎಂದು ಸೂಚಿಸಿದರು.

ಕಾಮಗಾರಿಯನ್ನು ಯಾವ ಕಾರಣಕ್ಕೂ ಸ್ಥಗಿತಗೊಳಿಸಲು ಆಗುವುದಿಲ್ಲ. ಸರಕಾರ ನಮಗೆ ಈ ಬಗ್ಗೆ ಆದೇಶ ನೀಡಬೇಕು ಎಂದರು. ವಿಗ್ರಹದ ರಿಯಾಲಿಟಿ ಚೆಕ್ ನಡೆಸಲು ಆಗುವುದಿಲ್ಲ. ಈ ಬಗ್ಗೆ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದೇನೆ. ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದರು. ಬಳಿಕ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.

ಪ್ರತಿಭಟನಾಕಾರರ ಆರೋಗ್ಯದಲ್ಲಿ ಏರುಪೇರು: ಪ್ರತಿಭಟನಾಕಾರರ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಲು ಸರ್ಕಾರಿ ಆಂಬುಲೆನ್ಸ್ ಸ್ಥಳಕ್ಕಾಗಿಮಿಸಿತು ಆದರೆ ಖಾಸಗಿ ಆಸ್ಪತ್ರೆಯಲ್ಲಿ ನಾವೇ ಚಿಕಿತ್ಸೆ ಪಡೆದುಕೊಳ್ಳುತ್ತೇವೆ ಎನ್ನುವ ಬೇಡಿಕೆ ಮುಂದಿಟ್ಟು ಪ್ರತಿಭಟನಾಕಾರರು ಸರ್ಕಾರಿ ಆಸ್ಪತ್ರೆಗೆ ದಾಖಲಾಗುವುದಿಲ್ಲ ಸರ್ಕಾರಿ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡಿದ್ದೇವೆ ಎಂದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಅನಂತ ಶಂಕರ್.ಜಿ, ಡಿವೈಎಸ್ಪಿ ಅರವಿಂದ ಕಲ್ಲಗುಚ್ಚಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು