ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಜದಂಡವನ್ನು ಸಂಸತ್ತಿನಲ್ಲಿ ಇಟ್ಟು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಮುಂದಿನ ಬಾರಿ ಪ್ರಧಾನಿ ಅವರು ಪ್ರಮಾಣ ವಚನ ಸ್ವೀಕರಿಸುವ ಮೊದಲು ರಾಜದಂಡವನ್ನು ಸ್ವೀಕರಿಸಿ, ಬಳಿಕ ಪ್ರಮಾಣವಚನ ಸ್ವೀಕರಿಸಬೇಕು. ಇದರಿಂದ ರಾಜದಂಡದ ಗೌರವ ಹೆಚ್ಚುತ್ತದೆ. ಹಿಂದಿನ ಸಂಪ್ರದಾಯಗಳು ಮರುಕಳಿಸುತ್ತವೆ ಎಂದು ಬಿಜೆಪಿ ಮುಖಂಡ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಹೇಳಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ರಾಜರ ಪಟ್ಟಾಭಿಷೇಕ ನಡೆಯುವಾಗ ರಾಜದಂಡ ನೀಡುವ ಸಂಪ್ರದಾಯ ಇತ್ತು. ಈಗ ಕುಟುಂಬ, ಗ್ರಾಮಕ್ಕೆ ಸಂಪ್ರದಾಯ ಸೀಮಿತಗೊಂಡಿದೆ. ಅರ್ಧದಲ್ಲಿ ನಿಂತಿದ್ದ ನಮ್ಮ ಮನೆತನದ ಸಂಪ್ರದಾಯವನ್ನು ದೈವಗಳ ಬೇಡಿಕೆ, ಕುಟುಂಬದ ಒಪ್ಪಿಗೆಯಂತೆ ನಾನು ರಾಜದಂಡ ಸ್ವೀಕರಿಸಿದ್ದೇನೆ. ಹಿಂದೆ ರಾಜರು ನ್ಯಾಯ ತೀರ್ಮಾನ ಮಾಡುವಾಗ, ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ರಾಜದಂಡ ಹಿಡಿಯುತ್ತಿದ್ದರು. ಆದರೆ ಈಗ ಅದು ವಿಜಯದಶಮಿ, ದೈವದ ಬಲಿ ನಡೆಯುವ ಸಂದರ್ಭದಲ್ಲಿ ಮಾತ್ರ ಹಿಡಿಯಲಾಗುತ್ತದೆ ಎಂದರು.
'ಬೀದರ್ ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ. ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿಯನ್ನು ಸಂಸತ್ತಿಗೆ ಗೆಲ್ಲಿಸಿ…
ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ತಾಲ್ಲೂಕಿನ ಗಡಿ ಭಾಗದ ಜನ ಜಾನುವಾರುಗಳ ಜತೆ ಪ್ರಾಣಿ ಪಕ್ಷಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ. ತಾಲ್ಲೂಕಿನ…
ನಗರದ ಚಾಮುಂಡಿ ಬೆಟ್ಟದ ಪಾದದಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಸೈನಿಕ ಅಕಾಡೆಮಿ ವತಿಯಿಂದ ಶನಿವಾರ ಪ್ರಾಣಿ ಪಕ್ಷಿಗಳು,…
ಹಾಸನ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ…
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವೆ ಕುಮಾರಿ…
ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮಗಳು ಉಂಟಾಗುತ್ತಿದೆ ಎಂಬ ಕುರಿತು ಜನರು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.