ಇಂದ್ರಾಳಿ: ಆರ್ ಪಿ. ಎಫ್ ಇನ್ಸ್ಪೆಕ್ಟರ್ ಸುಧೀರ್ ಶೆಟ್ಟಿ ಅವರ ಸಮಯ ಪ್ರಜ್ಞೆಯಿಂದ ರೈಲ್ವೆ ಹಳಿಯಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು ಇಂದ್ರಾಳಿಯಲ್ಲಿ ನಡೆದಿದೆ. ಪೋಲಿಸ್ ಅಧಿಕಾರಿಯ ಸಮಯಪ್ರಜ್ಞೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
ಇಂದ್ರಾಳಿಯ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಗಾಗಿ ನಿಧಾಗತಿಯಲ್ಲಿ ರೈಲು ಆಗಮಿಸುತಿತ್ತು. ರೈಲು ಹಳಿಯ ಮೇಲೆ ವ್ಯಕ್ತಿಯೊಬ್ಬರು ಬಿದ್ದಿರುವುದನ್ನು ಗಮನಿಸಿದ ಸುಧೀರ್ ಅವರು ವ್ಯಕ್ತಿಯನ್ನು ತಕ್ಷಣವೇ ರೈಲ್ವೆ ಹಳಿಯಿಂದ ಮೇಲೆತ್ತಿದ್ದಾರೆ. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಲಾಗಿತ್ತು. ತಕ್ಷಣ ಸ್ಪಂದಿಸಿದ ಒಳಕಾಡು ಅವರು ಅಸ್ವಸ್ಥ ವ್ಯಕ್ತಿಯನ್ನು ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ.
ಅಪರಿಚಿತ ಅಸ್ವಸ್ಥ ವ್ಯಕ್ತಿ ದಾಖಲು ಪ್ರಕ್ರಿಯೆ ನಡೆಸುವಾಗ ಹೆಸರು ಮಾಧವ್ , 65ವರ್ಷ, ತಂದೆ ರಾಮಚಂದ್ರ, ಪೊರಬಂದರ್, ಗುಜರಾತ್ ನಿವಾಸಿಯೆಂದು ಹೇಳಿಕೊಂಡಿದ್ದಾರೆ. ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.