Categories: ಉಡುಪಿ

ಪ್ರಮೋದ್ ಮಧ್ವರಾಜ್ ಬಿಜೆಪಿಗೆ ಹೋಗಿ ಮೀನಿಗೆ ಗಾಳ ಹಾಕಿ ಕೂರಬೇಕಷ್ಟೇ-ಡಿಕೆಶಿ ವಿವಾದಾತ್ಮಕ ಹೇಳಿಕೆ

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದರೂ ಅವರಿಗೆ ಏನೂ ಸಿಕ್ಕಿಲ್ಲ ಹಾಗಾಗಿ ಅವರು ಮೀನಿಗೆ ಗಾಳ ಹಾಕಿಕೊಂಡು ಕೂರಬೇಕಷ್ಟೆ ಎಂದು ಹೇಳಿರುವ ಮಾತು ವಿವಾದಕ್ಕೆ ಈಡಾಗಿದೆ.

ಬೇಡ ಬೇಡ ಎಂದಿದ್ದರೂ ಕೂಡ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಿದ್ದರು ಆದರೆ ಅವರಿಗೆ ಅಲ್ಲಿ ಯಾವುದೇ ರೀತಿ ಸ್ಥಾನಮಾನ ದೊರೆತ್ತಿಲ್ಲ.ಕನಿಷ್ಠ ಪಕ್ಷ ಬಿಜೆಪಿ ವೇದಿಕೆಯಲ್ಲಿ ಕುಳಿತುಕೊಳ್ಳಲು ಅವಕಾಶ ಸಿಕ್ಕಿಲ್ಲ ಹಾಗಾಗಿ ಅವರು ಮೀನಿಗೆ ಗಾಳ ಹಾಕಿಕೊಂಡು ಕೂರಬೇಕು.ಅವರು ಎಂಎಲ್‍ಸಿ ಆಗುವ ಆಸೆಯನ್ನು ಬಿಟ್ ಬಿಡೋದು ಒಳ್ಳೆಯದು ಮಧ್ವರಾಜ್ ಬಿಜೆಪಿಗೆ ಹೋದರು ಅವರ ಜತೆ ಒಬ್ಬನೇ ಒಬ್ಬ ಕಾರ್ಯಕರ್ತ ಕೂಡ ಹೋಗಿಲ್ಲ ಅದಕ್ಕಾಗಿ ನಾನು ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.

ಅಭಿಮಾನಿಗಳು ಆಕ್ರೋಶ ಪ್ರಮೋದ್ ಮಧ್ವರಾಜ್ ಅವರು ಮೀನಿಗೆ ಗಾಳ ಹಾಕಿಕೊಂಡು ಕೂರಬೇಕಷ್ಟೇ ಎಂದು ಹೇಳಿರುವ ಮಾತಿಗೆ ಸಾಮಾಜಿಕ ಜಾಲಾತಾಣಗಳಲ್ಲಿ ಆಕ್ರೋಶವನ್ನು ವ್ಯಕ್ತಪಡಿಸಿರುವ ಅವರ ಅಭಿಮಾನಿಗಳು. ಡಿಕೆಶಿ ಅವರೇ ಮೀನಿಗೆ ಗಾಳ ಹಾಕೋದು ಅವಮಾನವೇ ಎಂದು ಪ್ರಶ್ನೆ ಮಾಡಿದ್ದಾರೆ. ಗಾಳ ಹಾಕಿ ಮೀನು ಹಿಡಿಯುವ ಸಮುದಾಯದವರನ್ನು ವ್ಯಂಗ್ಯ ಮಾಡಿರುವುದು ಸರಿ ಅಲ್ಲಾ, ಅಷ್ಟಕ್ಕೂ ಗಾಳ ಹಾಕಿ ಮೀನು ಹಿಡಿದವರು ತಿಹಾರ್ ಜೈಲಿಗೆ ಹೋಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago