ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಕೊಡವೂರು ವಾರ್ಡ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಇಂದು ಮನೆ ಮನೆಗೆ ಭೇಟಿ ನೀಡಿದರು.
ಕೊಡವೂರು ವಾರ್ಡಿನ ಕಾಂಗ್ರೆಸ್ ಕಾರ್ಯಕರ್ತ ಪ್ರವೀಣ್ ಜಿ. ಕೊಡವೂರು ಮಾತನಾಡಿ, “ಕಳೆದ ಮೂರು ದಿನಗಳಿಂದ ಪ್ರಚಾರದಲ್ಲಿ ತೊಡಗಿದ್ದೇವೆ. ಇಂದು ನಮ್ಮೊಡನೆ ಪ್ರಸಾದ್ ರಾಜ್ ಕಾಂಚನ್ ರಿದ್ದಾರೆ. ವಾರ್ಡಿನ ಎಲ್ಲಾ ಕಾರ್ಯಕರ್ತರೂ ಹೊಸ ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ಕೊಡವೂರು ವಾರ್ಡಿನಲ್ಲಿ ಕಾಂಗ್ರೆಸ್ ಜಯಗಳಿಸುತ್ತದೆ. ಪ್ರಸಾದ್ ರವರ ಮೇಲೆ ಜನರ ಒಲವಿದೆ” ಎಂದರು.
ಪಕ್ಷದ ಮುಖಂಡರಾದ ಮೀನಾಕ್ಷಿ ಮಾಧವ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.