Categories: ಉಡುಪಿ

ಪ್ರಧಾನಿ ನರೇಂದ್ರ ಮೋದಿ ಅಂದರೆ ಅಭಿವೃದ್ಧಿ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕುಂದಾಪುರ: ವಾರಂಟಿ ಇಲ್ಲದ ಗ್ಯಾರಂಟಿ ಕಾರ್ಡ್ ಕಾಂಗ್ರೆಸ್ ಪಕ್ಷದ ಬದುಕಾಗಿದೆ, ಹತ್ತು ವರ್ಷಗಳ ಕಾಲ ಆಳಿದ ಕಾಂಗ್ರೆಸ್ ನೇತೃತ್ವದ ಮನಮೋಹನ್ ಸಿಂಗ್ ಸರಕಾರದ ಒಂದು ಅಭಿವೃದ್ಧಿ ಕೆಲಸವನ್ನು ಕಾಂಗ್ರೆಸ್ ಉದಾಹರಣೆ ಕೊಡಲಿ.ಮೋದಿ ಎಂದರೆ ಅಭಿವೃದ್ಧಿ ಎನ್ನುವುದು ಜನರಿಗೆ ನೆನಪಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕುಂದಾಪುರ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರ ಪರವಾಗಿ ಚುನಾವಣಾ ಪ್ರಚಾರದ ಕಾರ್ಯದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಸಿದ್ದರಾಮಯ್ಯನವರು ತಮ್ಮ ಆಡಳಿತದ ಅವಧಿಯಲ್ಲಿ ಸಮಾಜವನ್ನು ಒಡೆದು ಆಳುವ,ಧರ್ಮ ಧರ್ಮದ ನಡುವೆ ಜಗಳನ್ನು ತಂದೊಡ್ಡುವ ಕೆಟ್ಟ ಆಡಳಿತವನ್ನು ನೀಡಿದ್ದಾರೆ. ಇವತ್ತು ಸಹ ಅಭಿವೃದ್ಧಿ ಕೆಲಸದ ಬಗ್ಗೆ ಮಾತನಾಡದೆ ಟಿಪ್ಪು ಯುನಿವರ್ಸ್‍ಸಿಟಿ ಯನ್ನು ಜಾರಿಗೆ ತರುತ್ತೇವೆ ಎನ್ನುವುದರ ಮೂಲಕ ಧರ್ಮದ ಕಲಹಕ್ಕೆ ನಾಂದಿಯನ್ನು ಹಾಡುತ್ತಿದ್ದಾರೆ. ಕಾಂಗ್ರೆಸ್ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದೆ ಅವರ ಪೊಳ್ಳು ಭರವಸೆಗಳಿಗೆ, ಗ್ಯಾರಂಟಿ ಕಾರ್ಡಿಗೆ ಬೆಲೆ ಇಲ್ಲಾ ಎಂದರು.

ಮೋದಿ ಅವರನ್ನು ದೂಷಣೆ ಮಾಡುವುದೆ ಕಾಂಗ್ರೆಸ್ ಅಜೆಂಡಾವಾಗಿದೆ,ನಮ್ಮದು ಅಭಿವೃದ್ಧಿ ಅಜೆಂಡಾ. ಡಬ್ಬಲ್ ಇಂಜಿನ್ ಸರಕಾರದಿಂದ ಕರ್ನಾಟಕವು ಅಭಿವೃದ್ಧಿ ಪಥದತ್ತಾ ಸಾಗಿದೆ. 130 ಕ್ಕೂ ಹೆಚ್ಚಿನ ಸೀಟ್ ಗೆಲ್ಲುವ ಮುಖೇನ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದೇವೆ, ಉಡುಪಿಯಲ್ಲಿ 5 ಸೀಟ್ ಅನ್ನು ಗೆಲ್ಲಲಿದ್ದು, ಕುಂದಾಪುರದಲ್ಲಿ ಕಿರಣ್ ಕುಮಾರ್ ಕೊಡ್ಗಿ ಅವರು ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ ಎಂದರು.

ಮೋದಿ ಕೈ ಬಲಪಡಿಸಲು ಬಿಜೆಪಿಗೆ ಓಟ್ ನೀಡಬೇಕೆಂದು ಮತದಾರರಲ್ಲಿ ಕೇಳಿಕೊಂಡರು. ಶ್ಯಾಮಲ ಕುಂದರ್,ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Sneha Gowda

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

9 mins ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

18 mins ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

48 mins ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

1 hour ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

1 hour ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

2 hours ago