ಉಡುಪಿ: ಭಗವಾನ್ ಶ್ರೀರಾಮಚಂದ್ರ ಭಕ್ತರ ಅಧೀನ. ಕಾಂಗ್ರೆಸಿಗರು ಬಾಬರ್ ಮತ್ತು ಅವನ ಸಂತಾನವನ್ನು ಅಪ್ಪನಿಗಿಂತ ಜಾಸ್ತಿ ಹೊತ್ತುಕೊಂಡಿದ್ದಾರೆ. ಬಾಬರ್ ಸಂತಾನವನ್ನು ಪ್ರೀತಿಸಿದಷ್ಟು ಅವರ ಅಪ್ಪನನ್ನು ಪ್ರೀತಿಸುತ್ತಾರೋ ಗೊತ್ತಿಲ್ಲ. ರಾಮ ಈ ದೇಶವನ್ನು ಜೋಡಿಸಿದವ, ರಾಮ ಸಮಸ್ಯೆ ಅಲ್ಲ ಎಂದು ಬಿಜೆಪಿ ಮುಖಂಡ ಸಿಟಿ ರವಿ ಹೇಳಿದರು
ರಾಮ ಕಾಲ್ಪನಿಕ ಎಂದವರು ರಾಮನಾಮ ಜಪ ಆರಂಭಿಸಿದ್ದಾರೆ. ಅತಿಕ್ರಮಣಕಾರರನ್ನು ಬಿಟ್ಟು ರಾಮಕೃಷ್ಣ ಶಿವನ ಜೊತೆ ಮುಸಲ್ಮಾನರು ಗುರುತಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಸಿಟಿ ರವಿ ಹೇಳಿದರು.
ಬಾಬರ್ ಮತ್ತು ಅವನ ಸಂತಾನ ಓಲೈಸುವವರಿಗೂ ವೋಟ್ ಬ್ಯಾಂಕ್ ರಾಜಕೀಯದ ಅನಿವಾರ್ಯತೆ ಉಂಟಾಗಿದೆ. ರಾಮನನ್ನು ಬಿಟ್ಟರೆ ರಾಷ್ಟ್ರ ಇಲ್ಲ, ವೋಟ್ ಇಲ್ಲ ಎನ್ನುವುದು ಗೊತ್ತಾಗಿದೆ. ರಾಮ ಕಾಲ್ಪನಿಕ ಎಂದವರು ರಾಮನಾಮ ಜಪ ಆರಂಭಿಸಿದ್ದಾರೆ. ಅತಿಕ್ರಮಣಕಾರರನ್ನು ಬಿಟ್ಟು ರಾಮಕೃಷ್ಣ ಶಿವನ ಜೊತೆ ಮುಸಲ್ಮಾನರು ಗುರುತಿಸಿಕೊಳ್ಳುತ್ತಿದ್ದಾರೆ. ಮುಸಲ್ಮಾನರ ಪೂಜಾ ಪದ್ದತಿಯನ್ನು ನಾವು ಪ್ರಶ್ನೆ ಮಾಡುವುದಿಲ್ಲ.
ಅತಿಕ್ರಮಣದ ಜಾಗದಲ್ಲಿ ನಮಾಜ್ ಮಾಡಿದರೆ ಅದು ಹರಾಮ್ ಎಂದು ಮುಸಲ್ಮಾನರೇ ಹೇಳುತ್ತಾರೆ. ರಾಮ ಹುಟ್ಟಿದ ಜಾಗದಷ್ಟೇ ಕೃಷ್ಣನ ಮಥುರಾ ನಮಗೆ ಪವಿತ್ರ. ಜ್ಞಾನ ವ್ಯಾಪಿಯ ನಂದಿ ಕಾಶಿಯ ಪುನರುತ್ಥಾನಕ್ಕೆ ಕಾಯುತ್ತಿದ್ದಾನೆ. ನಮ್ಮ ಕ್ಷೇತ್ರಗಳನ್ನು ಬಿಟ್ಟು ಕೊಡಿ, ಸನಾತನಿಗಳ ವಿರುದ್ಧ ಮಾಡಿದ ಪಾಪ ನೀವು ಹೊತ್ತುಕೊಳ್ಳಬೇಡಿ ಎಂದು ಹೇಳಿದ್ದಾರೆ.