ಉಡುಪಿ: ಬೀದಿ ನಾಯಿಗಳಿಂದ ದಾಳಿಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿದ್ದ ಮಂಗವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಪಶುವೈದ್ಯ ಡಾ. ಸಂದೀಪ್ ಕುಮಾರ್ ಅವರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು.
ದುರದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಮಂಗ ಮೃತಪಟ್ಟಿದ್ದು, ಆ ಬಳಿಕ ಮಂಗದ ಕಳೇಬರವನ್ನು ಅರಣ್ಯ ಇಲಾಖೆಯ ವಶಕ್ಕೆ ನೀಡಲಾಯಿತು. ಮಹಜರು ಪ್ರಕ್ರಿಯೆ ನಡೆಸಿದ ಬಳಿಕ ಮಂಗನ ಕಳೇಬರದ ಅಂತ್ಯಸಂಸ್ಕಾರ ನಡೆಸಲಾಯಿತು . ಈ ಸಂದರ್ಭ ಉಪವಲಯ ಅರಣ್ಯ ಅಧಿಕಾರಿ ಗುರುರಾಜ್ ಕೆ, ಗಸ್ತು ಅರಣ್ಯ ಅಧಿಕಾರಿ ಕೇಶವ ಪೂಜಾರಿ ಉಪಸ್ಥಿತರಿದ್ದರು.