ಉಡುಪಿ: ರೋಟರಿ 3182ರ 7ನೇ ಜಿಲ್ಲಾ ಸಮ್ಮೇಳನ ಮಾ.3ರಿಂದ 5ರ ವರೆಗೆ ಉಡುಪಿಯ ಬಿಎಂಎಂ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಸಮ್ಮೇಳನ ಸಮಿತಿ ಉಪ ಸಭಾಪತಿ ಡಾ. ಗಿರಿಜಾ ತಿಳಿಸಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.3ರಂದು ಮೈಸೂರು ಅರಮನೆ ರಾಜಮತೆ ಡಾ. ಪ್ರಮೋದಾ ದೇವಿ ಒಡೆಯರ್ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಗವರ್ನರ್ ಡಾ. ಜಯಗೌರಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ನಾರಾಯಣ ಇನ್ ಸ್ಟಿಟ್ಯೂಟ್ ಆಫ್ ನ್ಯೂರೋ ಸೈನ್ಸಸ್ ನಿರ್ದೇಶಕ ಡಾ ತಿಮ್ಮಪ್ಪ ಹೆಗ್ಡೆ ನಿಯೋಜಿತ ಭಾಷಣ ಮಾಡಲಿದ್ದಾರೆ ಎಂದರು.
ಯಕ್ಷಗಾನ ಪ್ರದರ್ಶನ, ವಯೋಲಿನ್-ಸಿತಾರ್ ಜುಗಲ್ಬಂದಿ, ಶಾಸ್ತ್ರೀಯ ನೃತ್ಯ, ಸಂಗೀತ ರಸಮಂಜರಿ, ಫ್ಯಾಶನ್ ಶೋ, ಆಳ್ವಾಸ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಗಾನ, ನೃತ್ಯ ವೈವಿಧ್ಯ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಸಮಾರೋಪ ಸಮಾರಂಭ ಮಾ.5ರಂದು ಮಧ್ಯಾಹ್ನ 12.45ಕ್ಕೆ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ಕಾರ್ಯದರ್ಶಿ ರೇಣು ಜಯರಾಮ್, ರೋಟರಿ ಜಿಲ್ಲಾ ಕಾರ್ಯದರ್ಶಿ ಅಮಿತ್ ಅರವಿಂದ್, ಕಾರ್ಯಕ್ರಮ ಕಾರ್ಯದರ್ಶಿ ಸುಬ್ರಹ್ಮಣ್ಯ ಬಾಸ್ರಿ, ಸಹಾಯಕ ಗವರ್ನರ್ ರಾಮಚಂದ್ರ ಉಪಾಧ್ಯಾಯ, ಜಂಟಿ ಕಾರ್ಯದರ್ಶಿ ಪ್ರಶಾಂತ್ ಹೆಗ್ಡೆ ಇದ್ದರು.