News Karnataka Kannada
Monday, April 29 2024
ಉಡುಪಿ

ಉಡುಪಿ ಕೇಂದ್ರೀಯ ವಿದ್ಯಾಲಯದ ಕಟ್ಟಡ ನಿರ್ಮಾಣಕ್ಕೆ 26 ಕೋಟಿ ಬಿಡುಗಡೆ

Shobha Karandlaje gets additional charge of portfolio
Photo Credit : News Kannada

ಉಡುಪಿ:  ಕೇಂದ್ರೀಯ ವಿದ್ಯಾಲಯ ಮತ್ತು ಒಂಭತ್ತು ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕೆ ಕೇಂದ್ರ ಸರಕಾರದ ಶಿಕ್ಷಣ ಮತ್ತು ಕೌಶಲ್ಯ ಇಲಾಖೆ ಸುಮಾರು ರೂ.26 ಕೋಟಿ ಅನುದಾನವನ್ನು ಮಂಜೂರು ಮಾಡಿದೆಯೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಹಾಗೂ ಈ ಭಾಗದ ಸಂಸದೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.

ಪ್ರಸ್ತುತ ಬಾಡಿಗೆ ಕಟ್ಟಡದಲ್ಲಿ ಕೇಂದ್ರೀಯ ವಿದ್ಯಾಲಯ ಚಾಲನೆಯಲ್ಲಿತ್ತು. ಉಡುಪಿ ಜಿಲ್ಲೆಯಲ್ಲಿನ ಕೇಂದ್ರೀಯ ವಿದ್ಯಾಲಯ ಮತ್ತು ಸಿಬ್ಬಂದಿ ವಸತಿ ಕಟ್ಟಡಗಳ ಅವಶ್ಯಕತೆ ಬಗ್ಗೆ ಕೇಂದ್ರದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್‌ ರವರಲ್ಲಿ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ ಕೇಂದ್ರದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಇಲಾಖೆ ಸುಮಾರು ರೂ.26.00ಕೋಟಿ ಅನುದಾನವನ್ನು ಮಂಜೂರು ಮಾಡಿದೆ.

ಒಂದರಿಂದ ಹತ್ತನೆಯ ತರಗತಿಗಳಿಗೆ ತಲಾ ಎರಡು ವಿಭಾಗಗಳುಳ್ಳ ತರಗತಿ ಕೊಠಡಿಗಳು ಮತ್ತು ಒಂಬತ್ತು ಸಿಬ್ಬಂದಿ ವಸತಿಗಳ ಕಟ್ಟಡದ ನಿರ್ಮಾಣಕ್ಕೆ ಈಗಾಗಲೇ ಟೆಂಡರ ಅನುಮೋದನೆಯಾಗಿದ್ದು, ಅತೀ ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪ್ರಾರಂಭವಾಗಲಿದೆಯೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಕೇಂದ್ರೀಯ ವಿದ್ಯಾಲಯದ ಹೊಸ ಕಟ್ಟಡ ಈ ಭಾಗದ ವಿದ್ಯಾರ್ಥಿಗಳಿಗೆ ಸದುಪಯೋಗವಾಗಲಿದೆ. ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ನೀಡಿದ ನೆಚ್ಚಿನ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮತ್ತು ಕೇಂದ್ರದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್‌ ರವರಿಗೆ ಉಡುಪಿ-ಚಿಕ್ಕಮಗಳೂರು ಜಿಲ್ಲೆಯ ಸಂಸದೆ ಹಾಗೂ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿನಂದನೆ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು